ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

Published : Sep 12, 2023, 10:42 AM IST

ಅದು ಬರೋಬ್ಬರಿ 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ.. ಕ್ರೀಡಾಂಗಣ ಉದ್ಘಾಟನೆ ನಡೆದು ಐದಾರು ತಿಂಗಳು ಕಳೆದರು ಕ್ರೀಡಾಪಟುಗಳ ಬಳಕೆಗೆ ಸಿಗದೇ ಮೂಲೆ ಗುಂಪಾಗಿದೆ.
 

ಬರೋಬ್ಬರಿ 66 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಮಹಾತ್ಮ ಗಾಂಧಿ ಕ್ರೀಡಾಂಗಣ(Mahatma Gandhi Stadium) ರೆಡಿಯಿದೆ. 6 ತಿಂಗಳ ಹಿಂದೆಯೇ ಉದ್ಘಾಟನೆ ಕೂಡ ಆಗಿದೆ. ಅದ್ರೂ ಅಧಿಕಾರಿಗಳ ಹಗ್ಗಜಗ್ಗಾಟದಿಂದ ಕ್ರೀಡಾಪಟುಗಳಿಗೆ(sportsmen) ಮಾತ್ರ ಇದುವರೆಗೂ ಬಳಕೆಗೆ ಸಿಕ್ಕಿಲ್ಲ. 2018 ರಲ್ಲಿ ತುಮಕೂರು(Tumkur) ಜಿಲ್ಲೆಯ ಕ್ರೀಡಾಪಟುಗಳ ಅನುಕೂಲಕ್ಕೆಂದು ಸ್ಮಾರ್ಟ್ ಸಿಟಿ(Smart city) ಅನುದಾನದಡಿ 66 ಕೋಟಿ ವೆಚ್ಚದಲ್ಲಿ ಈ ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಈ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಿದ್ದಾರೆ. ಇದಾದ ಬಳಿಕ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳನ್ನು ಪೂರ್ನ ಗೊಳಿಸಿ ಕಳೆದ ಮಾರ್ಚ್ನಲ್ಲೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಯುವ ಸಬಲಿಕರಣ ಇಲಾಖೆಗೆ ಗ್ರೌಂಡ್ ಸುಪರ್ದಿಗೆ ಪಡೆಯುವಂತೆ ಸೂಚಿಸಿದ್ದಾರೆ. ಯುವ ಸಬಲಿಕರಣ ಇಲಾಖೆ ಆಯುಕ್ತರು ಸಹ ತುಮಕೂರು ಜಿಲ್ಲಾ ಸಬಲಿಕರಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇಷ್ಟಾದ್ರೂ ಕ್ರೀಡಾಪಟುಗಳಿಗೆ ಗ್ರೌಂಡ್ ಗೇಟ್ ತೆರೆದಿಲ್ಲ. ತುಮಕೂರು ಜಿಲ್ಲಾಡಳಿತ ಹಾಗೂ ಯುವ ಸಬಲಿಕರಣ ಇಲಾಖೆ ಗ್ರೌಂಡನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮೀನಾ ಮೇಷಾ ಮಾಡ್ತಿದ್ದಾರೆ. ಕ್ರೀಡಾಪಟುಗಳು ಪ್ರಶ್ನೆ ಮಾಡಿದ್ರೆ ಟೆಕ್ನಿಕಲ್ ಪ್ರಾಬ್ಲಂ ಇದೆ ಅಂತ ಸಬೂಬಹ ಹೇಳ್ತಿದ್ದಾರೆ. ಜಿಲ್ಲೆಯಲ್ಲಿ ಹೈಟೆಕ್ ಮಾದರಿಯ ಕ್ರೀಡಾಂಗಣ ಇದ್ರೂ ನಮಗೆ ಸಿಗ್ತಿಲ್ಲ.. ಪ್ರಾಕ್ಟಿಸ್ ಇಲ್ಲದೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗಿಯಾಗಲು ಕ್ರೀಡಾಪಟುಗಳಿಗೆ ಸಾಧ್ಯವಾಗ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮಕ್ಕಳು ಶಾಲೆಗೆ ಹೋಗಿದ್ದಾರಾ.. ಪೋಷಕರೇ ಎಚ್ಚರ ! ಅಪಹರಣಕಾರರ ಪತ್ತೆ ಹಚ್ಚದ ಖಾಕಿ !

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ