ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

ಉದ್ಘಾಟನೆಯಾದರೂ ಕ್ರೀಡಾಪಟುಗಳಿಗಿಲ್ಲ ಅಭ್ಯಾಸ ಭಾಗ್ಯ: 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ ಮೂಲೆ ಗುಂಪು..!

Published : Sep 12, 2023, 10:42 AM IST

ಅದು ಬರೋಬ್ಬರಿ 66 ಕೋಟಿ ವೆಚ್ಚದ ಹೈಟೆಕ್ ಕ್ರೀಡಾಂಗಣ.. ಕ್ರೀಡಾಂಗಣ ಉದ್ಘಾಟನೆ ನಡೆದು ಐದಾರು ತಿಂಗಳು ಕಳೆದರು ಕ್ರೀಡಾಪಟುಗಳ ಬಳಕೆಗೆ ಸಿಗದೇ ಮೂಲೆ ಗುಂಪಾಗಿದೆ.
 

ಬರೋಬ್ಬರಿ 66 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಮಹಾತ್ಮ ಗಾಂಧಿ ಕ್ರೀಡಾಂಗಣ(Mahatma Gandhi Stadium) ರೆಡಿಯಿದೆ. 6 ತಿಂಗಳ ಹಿಂದೆಯೇ ಉದ್ಘಾಟನೆ ಕೂಡ ಆಗಿದೆ. ಅದ್ರೂ ಅಧಿಕಾರಿಗಳ ಹಗ್ಗಜಗ್ಗಾಟದಿಂದ ಕ್ರೀಡಾಪಟುಗಳಿಗೆ(sportsmen) ಮಾತ್ರ ಇದುವರೆಗೂ ಬಳಕೆಗೆ ಸಿಕ್ಕಿಲ್ಲ. 2018 ರಲ್ಲಿ ತುಮಕೂರು(Tumkur) ಜಿಲ್ಲೆಯ ಕ್ರೀಡಾಪಟುಗಳ ಅನುಕೂಲಕ್ಕೆಂದು ಸ್ಮಾರ್ಟ್ ಸಿಟಿ(Smart city) ಅನುದಾನದಡಿ 66 ಕೋಟಿ ವೆಚ್ಚದಲ್ಲಿ ಈ ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಈ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಿದ್ದಾರೆ. ಇದಾದ ಬಳಿಕ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳನ್ನು ಪೂರ್ನ ಗೊಳಿಸಿ ಕಳೆದ ಮಾರ್ಚ್ನಲ್ಲೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಯುವ ಸಬಲಿಕರಣ ಇಲಾಖೆಗೆ ಗ್ರೌಂಡ್ ಸುಪರ್ದಿಗೆ ಪಡೆಯುವಂತೆ ಸೂಚಿಸಿದ್ದಾರೆ. ಯುವ ಸಬಲಿಕರಣ ಇಲಾಖೆ ಆಯುಕ್ತರು ಸಹ ತುಮಕೂರು ಜಿಲ್ಲಾ ಸಬಲಿಕರಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇಷ್ಟಾದ್ರೂ ಕ್ರೀಡಾಪಟುಗಳಿಗೆ ಗ್ರೌಂಡ್ ಗೇಟ್ ತೆರೆದಿಲ್ಲ. ತುಮಕೂರು ಜಿಲ್ಲಾಡಳಿತ ಹಾಗೂ ಯುವ ಸಬಲಿಕರಣ ಇಲಾಖೆ ಗ್ರೌಂಡನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮೀನಾ ಮೇಷಾ ಮಾಡ್ತಿದ್ದಾರೆ. ಕ್ರೀಡಾಪಟುಗಳು ಪ್ರಶ್ನೆ ಮಾಡಿದ್ರೆ ಟೆಕ್ನಿಕಲ್ ಪ್ರಾಬ್ಲಂ ಇದೆ ಅಂತ ಸಬೂಬಹ ಹೇಳ್ತಿದ್ದಾರೆ. ಜಿಲ್ಲೆಯಲ್ಲಿ ಹೈಟೆಕ್ ಮಾದರಿಯ ಕ್ರೀಡಾಂಗಣ ಇದ್ರೂ ನಮಗೆ ಸಿಗ್ತಿಲ್ಲ.. ಪ್ರಾಕ್ಟಿಸ್ ಇಲ್ಲದೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗಿಯಾಗಲು ಕ್ರೀಡಾಪಟುಗಳಿಗೆ ಸಾಧ್ಯವಾಗ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮಕ್ಕಳು ಶಾಲೆಗೆ ಹೋಗಿದ್ದಾರಾ.. ಪೋಷಕರೇ ಎಚ್ಚರ ! ಅಪಹರಣಕಾರರ ಪತ್ತೆ ಹಚ್ಚದ ಖಾಕಿ !

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!