ಬಾದಾಮಿಯ ಮಹೇಶ್‌ ಎಸ್‌. ಹೊಸಗೌಡ್ರುಗೆ ಒಲಿದ ಸುವರ್ಣ ಸಾಧಕರು ಪ್ರಶಸ್ತಿ

Sep 8, 2023, 9:12 AM IST

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬಾದಾಮಿಯ ಶ್ರೀ ಮೈಲಾರ ಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹೇಶ್‌ ಎಸ್‌. ಹೊಸಗೌಡ್ರು(Mahesh S Hosgaudru) ಅವರ ಶಿಕ್ಷಣ(Education) ಕ್ಷೇತ್ರದ ಸಾಧನೆಯನ್ನು ಗುರುತಿಸಲಾಗಿದೆ. ಹಾಗಾಗಿ ಅವರಿಗೆ ಸುವರ್ಣ ಸಾಧಕರು ಪ್ರಶಸ್ತಿಯನ್ನು(Suvarna Sadhakaru Award) ನೀಡಲಾಗಿದೆ. ಗ್ರಾಮೀಣ ಮಟ್ಟದ ಮಕ್ಕಳಿಗೆ ಶಿಕ್ಷಣ ಕೊಡುವುದು ಈ ಸಂಸ್ಥೆಯ ಉದ್ದೇಶವಾಗಿದೆ ಎಂದು ಮಹೇಶ್‌ ಅವರು ಹೇಳಿದರು. 

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ