ಸಾಂಸ್ಕೃತಿಕ ನಗರಿಯಲ್ಲಿ ಮಹಿಷ ದಸರಾ ಸಂಘರ್ಷ: ಕರಾವಳಿಗೂ ಹಬ್ಬಿದ ಮಹಿಷ ದಸರಾ ನಂಟು..!

ಸಾಂಸ್ಕೃತಿಕ ನಗರಿಯಲ್ಲಿ ಮಹಿಷ ದಸರಾ ಸಂಘರ್ಷ: ಕರಾವಳಿಗೂ ಹಬ್ಬಿದ ಮಹಿಷ ದಸರಾ ನಂಟು..!

Published : Oct 06, 2023, 10:48 AM IST

ಮೈಸೂರು ದಸರಾ ಎಷ್ಟೊಂದು ಸುಂದರ.. ಅದರಲ್ಲೂ ವಿಶ್ವವಿಖ್ಯಾತ ಜಂಬೂ ಸವಾರಿ ನೋಡೋಕೆ ಜನಸಾಗರವೆ ಹರಿದು ಬರುತ್ತೆ. ದಸರಾ ಸಂಭ್ರಮಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಇದರ ಮಧ್ಯೆ ಮೈಸೂರು ದಸರಾ ಸಿದ್ಧತೆಗಿಂತಲೂ ಮಹಿಷ ದಸರಾ ಸದ್ದು ಮಾಡುತ್ತಿದೆ. ಪ್ರಗತಿಪರರ ಮೈಸೂರು ಮಹಿಷಾ ದಸರಾ ವಿರೋಧಿಸಿ ಬಿಜೆಪಿ ಚಾಮುಂಡಿ ಚಲೋಗೆ ಕರೆ ಕೊಟ್ಟಿದೆ. ಇದರ ಬೆನ್ನಲ್ಲೇ ಈಗ ಉಡುಪಿಯಲ್ಲೂ ಮಹಿಷ ದಸರಾ ದಂಗಲ್ ಶುರುವಾಗಿದೆ.

ಮೈಸೂರಿನ ಮಹಿಷ ದಸರಾ ಗದ್ದಲ ಈಗ ಕೃಷ್ಣನಗರಿ ಉಡುಪಿಯಲ್ಲಿಯೂ(Udupi) ಸದ್ದು ಮಾಡುತ್ತಿದೆ. ಉಡುಪಿಯ ಅಂಬೇಡ್ಕರ್ ಯುವಸೇನೆ ಉಡುಪಿಯಲ್ಲಿ ಮಹಿಷ ದಸರಾ(Mahisha dasara) ಆಯೋಜನೆಗೆ ಮುಂದಾಗಿದೆ. ಅಕ್ಟೋಬರ್ 15ಕ್ಕೆ ಉಡುಪಿಯಲ್ಲಿ ಮಹಿಷ ದಸರಾಗೆ ಯುವಸೇನೆ ಸಿದ್ಧತೆ ನಡೆಸಿದ್ದು, ಪ್ರಮುಖ ರಸ್ತೆಯಲ್ಲಿ ಟ್ಯಾಬ್ಲೋ(Tableau) ಮೂಲಕ ಮೆರವಣಿಗೆ ನಡೆಸಿ, ಬಳಿಕ  ವಿಚಾರ ಸಂಕಿರಣ ನಡೆಸಲು ಪ್ಲಾನ್ ಮಾಡಿದ್ದಾರೆ. ಪುರಾಣ ಮತ್ತು ಹಿಂದುತ್ವವನ್ನು ಮತ್ತು ಈಗ ನಡೆಯುವ ಆಚರಣೆಯನ್ನು ನಾವು ವಿರೋಧ ಮಾಡಲ್ಲ. ಆದ್ರೆ, ಇತಿಹಾಸಕಾರರು ಪಠ್ಯದಲ್ಲೂ ಕಥೆಯನ್ನು ತಿರುಚಿದ್ದಾರೆ. ಮಹಿಷ ಮಂಡಲದ ಪ್ರತಿಷ್ಠಿತ ದೊರೆಯನ್ನು ಖಳನಾಯಕನ ರೀತಿ ಚಿತ್ರಿಸಲಾಗಿದೆ ಅನ್ನೋದು ಮಹಿಷ ದಸರಾ ಪರ ನಿಂತವರ ವಾದ. ಅಕ್ಟೋಬರ್ 24ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಿಸಲು ಅರಮನೆ ನಗರಿ ಸಜ್ಜಾಗುತ್ತಿದೆ. ಇದಕ್ಕೂ ಮುನ್ನ ಪ್ರಗತಿಪರರ ಗುಂಪು ಮಹಿಷ ದಸರಾಕ್ಕೆ ಸಜ್ಜಾಗಿದ್ದು ಮೈಸೂರು ಮತ್ತು ಉಡುಪಿಯಲ್ಲಿ ಮತ್ತೊಂದು ಸಂಘರ್ಷಕ್ಕೆ ಮುನ್ನುಡಿ ಬರೆದಿದೆ. 

ಇದನ್ನೂ ವೀಕ್ಷಿಸಿ:  ಹಿಂದಿ ಘೋಸ್ಟ್‌ ಟ್ರೈಲರ್‌ಗೆ ಕನ್ನಡಕ್ಕಿಂತ ಡಬಲ್, ತ್ರಿಬಲ್ ವೀಕ್ಷಣೆ! ಕನ್ಫ್ಯೂಸ್ ಆದ ಕನ್ನಡ ಪ್ರೇಕ್ಷಕ!

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more