Shivamogga: ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ, ಮಧ್ಯಾಹ್ನವಾದರೂ ಸೂರ್ಯರಶ್ಮಿ ಬೀಳಲ್ಲ!

Shivamogga: ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ, ಮಧ್ಯಾಹ್ನವಾದರೂ ಸೂರ್ಯರಶ್ಮಿ ಬೀಳಲ್ಲ!

Suvarna News   | Asianet News
Published : Dec 25, 2021, 03:45 PM ISTUpdated : Dec 25, 2021, 04:05 PM IST

ಇಬ್ಬನಿ ತಬ್ಬಿದ ಇಳೆಯಲ್ಲಿ ರವಿತೇಜ ಕಣ್ಣ ತೆರೆದು,  ಬಾನ ಕೋಟಿ ಕಿರಣ ಇಳಿದು ಬಂತು ಭೂಮಿಗೆ. ಆದರೆ ಬೆಳ್ಳಂಬೆಳಿಗ್ಗೆ ಸೂರ್ಯನ ಹೊಂಗಿರಣವೇ ಕಣ್ಮರೆಯಾಗಿ  ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ (Mist) ಹಗಲು ಹೊತ್ತಿನಲ್ಲೇ ವಾಹನ ಸವಾರರು ಹೆಡ್ ಲೈಟ್ ಹಾಕಿ ಸಂಚರಿಸ ಬೇಕಾದ ಸ್ಥಿತಿ....! 

ಶಿವಮೊಗ್ಗ (ಡಿ. 25):  ಇಬ್ಬನಿ ತಬ್ಬಿದ ಇಳೆಯಲ್ಲಿ ರವಿತೇಜ ಕಣ್ಣ ತೆರೆದು,  ಬಾನ ಕೋಟಿ ಕಿರಣ ಇಳಿದು ಬಂತು ಭೂಮಿಗೆ. ಆದರೆ ಬೆಳ್ಳಂಬೆಳಿಗ್ಗೆ ಸೂರ್ಯನ ಹೊಂಗಿರಣವೇ ಕಣ್ಮರೆಯಾಗಿ  ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ (Mist) ಹಗಲು ಹೊತ್ತಿನಲ್ಲೇ ವಾಹನ ಸವಾರರು ಹೆಡ್ ಲೈಟ್ ಹಾಕಿ ಸಂಚರಿಸ ಬೇಕಾದ ಸ್ಥಿತಿ....! ಹೌದು ಕಳೆದೊಂದು ವಾರದಿಂದ ಕೊರೆಯುವ ಚಳಿಗೆ  ಮಲೆನಾಡಿನ ನಡುಮನೆ ಶಿವಮೊಗ್ಗ (Shivamogga) ಥಂಡಾ... ಥಂಡಾ... ಕೂಲ್..... ಕೂಲ್... ಆಗಿದೆ. ಕನಿಷ್ಠ 13 ಡಿಗ್ರಿಯಿಂದ 16 ಡಿಗ್ರಿಯವರೆಗೆ ಇರುವ ತಾಪಮಾನ ಜನತೆಯನ್ನು ಬೆಚ್ಚಿ ಬೀಳಿಸಿದೆ. 

ಮಲೆನಾಡಿನಲ್ಲಿ ಚಮು ಚುಮು ಚಳಿ (Winter) ಆರಂಭಗೊಂಡಿದೆ . ಡಿಸೆಂಬರ್ ಮೊದಲನೇ ವಾರದ ವರೆಗೆ ಹಿಂಗಾರು ಮಳೆ ಸುರಿದಿದ್ದು ಈಗ ಶಿವಮೊಗ್ಗದಲ್ಲಿ (Shivamogga) ಸಂಪೂರ್ಣ ಚಳಿ ಆವರಿಸಿಕೊಂಡಿದೆ . ಮಧ್ಯಾಹ್ನ 11 ಗಂಟೆಯಾದರೂ ಚಳಿಯ ಅನುಭವ ಹೋಗುತ್ತಿಲ್ಲ. ಎಳೆ ಬಿಸಿಲಿಗೆ ಮೈವೊಡ್ಡಬೇಕೆಂಬ ಅನುಭವ ಹುಟ್ಟುವುದು ಸಹಜ . ಬೆಳಿಗ್ಗಿನ ಜಾವದ ಹೊತ್ತಿಗೆ 13 ರಿಂದ 16 ಡಿಗ್ರಿ ತಲುಪಿದೆ . ಬೆಳಗ್ಗಿನ ಜಾವ ಬಿದ್ದ ಹಿಮದ ಹತ್ತಿರದಲ್ಲಿರುವ ಮನುಷ್ಯ ಕಾಣದಂತೆ ಅನುಭವ ಮೂಡಿಸಿದೆ .

ಈ ರೀತಿಯ ಚಳಿ ಮುಂದಿನ 15 ದಿನಗಳ ವರೆಗೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ ಚಳಿಗೆ ಬೆಚ್ಚಗಿನ ಸ್ವೆಟರ್, ಮಫ್ಲರ್, ಉಲ್ಲನ್, ಟೋಪಿ ಏನೆಲ್ಲಾ ಹಾಕಿದರೂ ಹೊರಗಡೆ ಇರುವವರಿಗೆ ಚಳಿಗೆ ಮುದುರಿಕೊಳ್ಳುವಂತಾಗಿದೆ . ಈ ಚಳಿಗೆ ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು , ವಾಕಿಂಗ್ ಮಾಡುವವರ  ಪರದಾಟ ಹೇಳ ತೀರದು. ಬಿಸಿ ಬಿಸಿ ಟೀ, ಕಾಫಿ ಕುಡಿದರೂ ಮೈ ಬಿಸಿಯಾಗದೇ ನಡುಗುವಂತಾಗಿದೆ. ಒಟ್ಟಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಬಿಟ್ಟು ಬಿಟ್ಟು ಮಳೆ ಸುರಿದು ಇದೀಗ ಡಿಸೆಂಬರ್ ನಲ್ಲಿ  ಚಳಿಯ ತೀವ್ರತೆ ಹೆಚ್ಚಾಗಿದೆ. ಜನತೆ ಮಾತ್ರ ಪ್ರಕೃತಿಯ ಈ ವೈಚಿತ್ರ್ಯಕ್ಕೆ ಹೈರಾಣಾಗಿದ್ದಾರೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more