Shivamogga: ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ, ಮಧ್ಯಾಹ್ನವಾದರೂ ಸೂರ್ಯರಶ್ಮಿ ಬೀಳಲ್ಲ!

Shivamogga: ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ, ಮಧ್ಯಾಹ್ನವಾದರೂ ಸೂರ್ಯರಶ್ಮಿ ಬೀಳಲ್ಲ!

Suvarna News   | Asianet News
Published : Dec 25, 2021, 03:45 PM ISTUpdated : Dec 25, 2021, 04:05 PM IST

ಇಬ್ಬನಿ ತಬ್ಬಿದ ಇಳೆಯಲ್ಲಿ ರವಿತೇಜ ಕಣ್ಣ ತೆರೆದು,  ಬಾನ ಕೋಟಿ ಕಿರಣ ಇಳಿದು ಬಂತು ಭೂಮಿಗೆ. ಆದರೆ ಬೆಳ್ಳಂಬೆಳಿಗ್ಗೆ ಸೂರ್ಯನ ಹೊಂಗಿರಣವೇ ಕಣ್ಮರೆಯಾಗಿ  ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ (Mist) ಹಗಲು ಹೊತ್ತಿನಲ್ಲೇ ವಾಹನ ಸವಾರರು ಹೆಡ್ ಲೈಟ್ ಹಾಕಿ ಸಂಚರಿಸ ಬೇಕಾದ ಸ್ಥಿತಿ....! 

ಶಿವಮೊಗ್ಗ (ಡಿ. 25):  ಇಬ್ಬನಿ ತಬ್ಬಿದ ಇಳೆಯಲ್ಲಿ ರವಿತೇಜ ಕಣ್ಣ ತೆರೆದು,  ಬಾನ ಕೋಟಿ ಕಿರಣ ಇಳಿದು ಬಂತು ಭೂಮಿಗೆ. ಆದರೆ ಬೆಳ್ಳಂಬೆಳಿಗ್ಗೆ ಸೂರ್ಯನ ಹೊಂಗಿರಣವೇ ಕಣ್ಮರೆಯಾಗಿ  ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ (Mist) ಹಗಲು ಹೊತ್ತಿನಲ್ಲೇ ವಾಹನ ಸವಾರರು ಹೆಡ್ ಲೈಟ್ ಹಾಕಿ ಸಂಚರಿಸ ಬೇಕಾದ ಸ್ಥಿತಿ....! ಹೌದು ಕಳೆದೊಂದು ವಾರದಿಂದ ಕೊರೆಯುವ ಚಳಿಗೆ  ಮಲೆನಾಡಿನ ನಡುಮನೆ ಶಿವಮೊಗ್ಗ (Shivamogga) ಥಂಡಾ... ಥಂಡಾ... ಕೂಲ್..... ಕೂಲ್... ಆಗಿದೆ. ಕನಿಷ್ಠ 13 ಡಿಗ್ರಿಯಿಂದ 16 ಡಿಗ್ರಿಯವರೆಗೆ ಇರುವ ತಾಪಮಾನ ಜನತೆಯನ್ನು ಬೆಚ್ಚಿ ಬೀಳಿಸಿದೆ. 

ಮಲೆನಾಡಿನಲ್ಲಿ ಚಮು ಚುಮು ಚಳಿ (Winter) ಆರಂಭಗೊಂಡಿದೆ . ಡಿಸೆಂಬರ್ ಮೊದಲನೇ ವಾರದ ವರೆಗೆ ಹಿಂಗಾರು ಮಳೆ ಸುರಿದಿದ್ದು ಈಗ ಶಿವಮೊಗ್ಗದಲ್ಲಿ (Shivamogga) ಸಂಪೂರ್ಣ ಚಳಿ ಆವರಿಸಿಕೊಂಡಿದೆ . ಮಧ್ಯಾಹ್ನ 11 ಗಂಟೆಯಾದರೂ ಚಳಿಯ ಅನುಭವ ಹೋಗುತ್ತಿಲ್ಲ. ಎಳೆ ಬಿಸಿಲಿಗೆ ಮೈವೊಡ್ಡಬೇಕೆಂಬ ಅನುಭವ ಹುಟ್ಟುವುದು ಸಹಜ . ಬೆಳಿಗ್ಗಿನ ಜಾವದ ಹೊತ್ತಿಗೆ 13 ರಿಂದ 16 ಡಿಗ್ರಿ ತಲುಪಿದೆ . ಬೆಳಗ್ಗಿನ ಜಾವ ಬಿದ್ದ ಹಿಮದ ಹತ್ತಿರದಲ್ಲಿರುವ ಮನುಷ್ಯ ಕಾಣದಂತೆ ಅನುಭವ ಮೂಡಿಸಿದೆ .

ಈ ರೀತಿಯ ಚಳಿ ಮುಂದಿನ 15 ದಿನಗಳ ವರೆಗೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ ಚಳಿಗೆ ಬೆಚ್ಚಗಿನ ಸ್ವೆಟರ್, ಮಫ್ಲರ್, ಉಲ್ಲನ್, ಟೋಪಿ ಏನೆಲ್ಲಾ ಹಾಕಿದರೂ ಹೊರಗಡೆ ಇರುವವರಿಗೆ ಚಳಿಗೆ ಮುದುರಿಕೊಳ್ಳುವಂತಾಗಿದೆ . ಈ ಚಳಿಗೆ ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು , ವಾಕಿಂಗ್ ಮಾಡುವವರ  ಪರದಾಟ ಹೇಳ ತೀರದು. ಬಿಸಿ ಬಿಸಿ ಟೀ, ಕಾಫಿ ಕುಡಿದರೂ ಮೈ ಬಿಸಿಯಾಗದೇ ನಡುಗುವಂತಾಗಿದೆ. ಒಟ್ಟಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಬಿಟ್ಟು ಬಿಟ್ಟು ಮಳೆ ಸುರಿದು ಇದೀಗ ಡಿಸೆಂಬರ್ ನಲ್ಲಿ  ಚಳಿಯ ತೀವ್ರತೆ ಹೆಚ್ಚಾಗಿದೆ. ಜನತೆ ಮಾತ್ರ ಪ್ರಕೃತಿಯ ಈ ವೈಚಿತ್ರ್ಯಕ್ಕೆ ಹೈರಾಣಾಗಿದ್ದಾರೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more