Shivamogga: ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ, ಮಧ್ಯಾಹ್ನವಾದರೂ ಸೂರ್ಯರಶ್ಮಿ ಬೀಳಲ್ಲ!

Shivamogga: ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ, ಮಧ್ಯಾಹ್ನವಾದರೂ ಸೂರ್ಯರಶ್ಮಿ ಬೀಳಲ್ಲ!

Suvarna News   | Asianet News
Published : Dec 25, 2021, 03:45 PM ISTUpdated : Dec 25, 2021, 04:05 PM IST

ಇಬ್ಬನಿ ತಬ್ಬಿದ ಇಳೆಯಲ್ಲಿ ರವಿತೇಜ ಕಣ್ಣ ತೆರೆದು,  ಬಾನ ಕೋಟಿ ಕಿರಣ ಇಳಿದು ಬಂತು ಭೂಮಿಗೆ. ಆದರೆ ಬೆಳ್ಳಂಬೆಳಿಗ್ಗೆ ಸೂರ್ಯನ ಹೊಂಗಿರಣವೇ ಕಣ್ಮರೆಯಾಗಿ  ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ (Mist) ಹಗಲು ಹೊತ್ತಿನಲ್ಲೇ ವಾಹನ ಸವಾರರು ಹೆಡ್ ಲೈಟ್ ಹಾಕಿ ಸಂಚರಿಸ ಬೇಕಾದ ಸ್ಥಿತಿ....! 

ಶಿವಮೊಗ್ಗ (ಡಿ. 25):  ಇಬ್ಬನಿ ತಬ್ಬಿದ ಇಳೆಯಲ್ಲಿ ರವಿತೇಜ ಕಣ್ಣ ತೆರೆದು,  ಬಾನ ಕೋಟಿ ಕಿರಣ ಇಳಿದು ಬಂತು ಭೂಮಿಗೆ. ಆದರೆ ಬೆಳ್ಳಂಬೆಳಿಗ್ಗೆ ಸೂರ್ಯನ ಹೊಂಗಿರಣವೇ ಕಣ್ಮರೆಯಾಗಿ  ಮೈ ನಡುಗುವ ಚಳಿ, ಮಂಜು ಮುಸುಕಿದ ವಾತಾವರಣ (Mist) ಹಗಲು ಹೊತ್ತಿನಲ್ಲೇ ವಾಹನ ಸವಾರರು ಹೆಡ್ ಲೈಟ್ ಹಾಕಿ ಸಂಚರಿಸ ಬೇಕಾದ ಸ್ಥಿತಿ....! ಹೌದು ಕಳೆದೊಂದು ವಾರದಿಂದ ಕೊರೆಯುವ ಚಳಿಗೆ  ಮಲೆನಾಡಿನ ನಡುಮನೆ ಶಿವಮೊಗ್ಗ (Shivamogga) ಥಂಡಾ... ಥಂಡಾ... ಕೂಲ್..... ಕೂಲ್... ಆಗಿದೆ. ಕನಿಷ್ಠ 13 ಡಿಗ್ರಿಯಿಂದ 16 ಡಿಗ್ರಿಯವರೆಗೆ ಇರುವ ತಾಪಮಾನ ಜನತೆಯನ್ನು ಬೆಚ್ಚಿ ಬೀಳಿಸಿದೆ. 

ಮಲೆನಾಡಿನಲ್ಲಿ ಚಮು ಚುಮು ಚಳಿ (Winter) ಆರಂಭಗೊಂಡಿದೆ . ಡಿಸೆಂಬರ್ ಮೊದಲನೇ ವಾರದ ವರೆಗೆ ಹಿಂಗಾರು ಮಳೆ ಸುರಿದಿದ್ದು ಈಗ ಶಿವಮೊಗ್ಗದಲ್ಲಿ (Shivamogga) ಸಂಪೂರ್ಣ ಚಳಿ ಆವರಿಸಿಕೊಂಡಿದೆ . ಮಧ್ಯಾಹ್ನ 11 ಗಂಟೆಯಾದರೂ ಚಳಿಯ ಅನುಭವ ಹೋಗುತ್ತಿಲ್ಲ. ಎಳೆ ಬಿಸಿಲಿಗೆ ಮೈವೊಡ್ಡಬೇಕೆಂಬ ಅನುಭವ ಹುಟ್ಟುವುದು ಸಹಜ . ಬೆಳಿಗ್ಗಿನ ಜಾವದ ಹೊತ್ತಿಗೆ 13 ರಿಂದ 16 ಡಿಗ್ರಿ ತಲುಪಿದೆ . ಬೆಳಗ್ಗಿನ ಜಾವ ಬಿದ್ದ ಹಿಮದ ಹತ್ತಿರದಲ್ಲಿರುವ ಮನುಷ್ಯ ಕಾಣದಂತೆ ಅನುಭವ ಮೂಡಿಸಿದೆ .

ಈ ರೀತಿಯ ಚಳಿ ಮುಂದಿನ 15 ದಿನಗಳ ವರೆಗೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ ಚಳಿಗೆ ಬೆಚ್ಚಗಿನ ಸ್ವೆಟರ್, ಮಫ್ಲರ್, ಉಲ್ಲನ್, ಟೋಪಿ ಏನೆಲ್ಲಾ ಹಾಕಿದರೂ ಹೊರಗಡೆ ಇರುವವರಿಗೆ ಚಳಿಗೆ ಮುದುರಿಕೊಳ್ಳುವಂತಾಗಿದೆ . ಈ ಚಳಿಗೆ ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು , ವಾಕಿಂಗ್ ಮಾಡುವವರ  ಪರದಾಟ ಹೇಳ ತೀರದು. ಬಿಸಿ ಬಿಸಿ ಟೀ, ಕಾಫಿ ಕುಡಿದರೂ ಮೈ ಬಿಸಿಯಾಗದೇ ನಡುಗುವಂತಾಗಿದೆ. ಒಟ್ಟಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಬಿಟ್ಟು ಬಿಟ್ಟು ಮಳೆ ಸುರಿದು ಇದೀಗ ಡಿಸೆಂಬರ್ ನಲ್ಲಿ  ಚಳಿಯ ತೀವ್ರತೆ ಹೆಚ್ಚಾಗಿದೆ. ಜನತೆ ಮಾತ್ರ ಪ್ರಕೃತಿಯ ಈ ವೈಚಿತ್ರ್ಯಕ್ಕೆ ಹೈರಾಣಾಗಿದ್ದಾರೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more