* ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ ಶಾಸಕ ನಂಜೇಗೌಡ
* ಸ್ವಗ್ರಾಮ ಕೊಮ್ಮನಹಳ್ಳಿ ನಡೆದ ಪೂಜಾ ಕಾರ್ಯಕ್ರಮ
* ಪ್ರತಿ ವರ್ಷದ ಸಂಪ್ರದಾಯದಂತೆ ಗ್ರಾಮದಲ್ಲಿ ದಸರಾ ಆಚರಣೆ
ಕೋಲಾರ(ಅ.15): ಜಿಲ್ಲೆಯ ಮಾಲೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿಜಯದಶಮಿ ಅಂಗವಾಗಿ ನಾಡಬಂದೂಕಿನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಸ್ವಗ್ರಾಮ ಕೊಮ್ಮನಹಳ್ಳಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬನ್ನಿಮರ, ಶಸ್ತಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ಬಳಿಕ ನಾಡ ಬಂದೂಕಿನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಪ್ರತಿ ವರ್ಷದ ಸಂಪ್ರದಾಯದಂತೆ ಗ್ರಾಮದಲ್ಲಿ ದಸರಾ ಹಬ್ಬವನ್ನ ಆಚರಣೆ ಮಾಡಲಾಗಿದೆ.