ವ್ಹೀಲ್‌ಚೇರ್‌ನಲ್ಲೇ ಅಯೋಧ್ಯೆಗೆ ಹೊರಟ ಸಾಹಸಿ: ರಾಮನ ಕಾಣುವ ಕನಸು ಕೊನೆಗೂ ನನಸಾಗುತ್ತಾ ?

ವ್ಹೀಲ್‌ಚೇರ್‌ನಲ್ಲೇ ಅಯೋಧ್ಯೆಗೆ ಹೊರಟ ಸಾಹಸಿ: ರಾಮನ ಕಾಣುವ ಕನಸು ಕೊನೆಗೂ ನನಸಾಗುತ್ತಾ ?

Published : Dec 11, 2023, 02:59 PM IST

ಅಯೋಧ್ಯೆಯಲ್ಲಿ ರಾಮಮಂದಿರ ಕಾಣುವ ಕೋಟ್ಯಾಂತರ ಜನರ ಬಯಕೆ ಈಡೇರುತ್ತಿದೆ. ಮಂದಿರದ ಕನಸು ಕಂಡ ವ್ಯಕ್ತಿಯೊಬ್ಬರು ತನ್ನ ಬಲಹೀನತೆಯನ್ನು ಕೂಡ ಲೆಕ್ಕಿಸದೆ ವ್ಹೀಲ್ ಚೇರ್‌ನಲ್ಲೇ ಅಯೋಧ್ಯೆಯ ಕಡೆ ಹೊರಟಿದ್ದಾರೆ. 

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಕೋಟ್ಯಾಂತ ಭಕ್ತರ ಕನಸು ಈಡೇರಲಿದೆ. ಅದ್ರೆ ಇಲ್ಲೊಬ್ಬರು ತನ್ನ ಕನಸ್ಸಿಗೆ ರೆಕ್ಕೆ ಕಟ್ಟಿ ವ್ಹೀಲ್‌ಚೇರ್‌ನಲ್ಲೇ(wheelchair) ಅಯೋಧ್ಯೆಗೆ ತೆರಳಲು ಮುಂದಾಗಿದ್ದಾರೆ. ಹೌದು ಇವರ ಹೆಸರು ಮಂಜುನಾಥ. ಮೂಲತಃ ಸಿಂಧಗಿಯವರು ಊರ್ ಊರ್ ಸುತ್ತುವುದೇ ಇವರ ಹವ್ಯಾಸವಾಗಿದೆ. ಅವಘಡ ಒಂದರಲ್ಲಿ ಕಾಲಿನ ಬಲ ಕಳೆದುಕೊಂಡ್ರು ತೀರ್ಥಯಾತ್ರೆ ಮಾಡುವುದನ್ನ ಮಾತ್ರ ಬಿಟ್ಟಿಲ್ಲ. ಒಂದು ಕ್ಷಣವು ನಿಂತ ಊರಲ್ಲಿ ನಿಲ್ಲದೆ, ಊರೂರು ಅಲೆಯುತ್ತಿದ್ದಾರೆ. ಇದೀಗ ರಾಮ ಮಂದಿರ(Ram Mandir) ಉದ್ಘಾಟನೆಯ ಸುದ್ದಿ ಕೇಳಿ ಮತ್ತೆ ಉತ್ತರಪ್ರದೇಶದತ್ತ ಮುಖ ಮಾಡಿದ್ದಾರೆ. ವ್ಹೀಲ್‌ಚೇರ್‌ನಲ್ಲಿ ಕುಳಿತುಕೊಂಡು, ಕೈಯಿಂದಲೇ ಅದನ್ನು ನಿಯಂತ್ರಿಸುತ್ತಾ, ಪ್ರತಿದಿನ ಹತ್ತಾರು ಕಿಲೋಮೀಟರ್ ಅಲೆದಾಡುವುದು ಸುಲಭದ ಮಾತಲ್ಲ. ಅದು ಕೂಡ ಒಬ್ಬಂಟಿಯಾಗಿ ತೀರ್ಥಕ್ಷೇತ್ರಗಳ ಸಂದರ್ಶನ ಮಾಡುತ್ತಾ ಉಡುಪಿಗೆ ಬಂದಿದ್ದ ಮಂಜುನಾಥ್ ತನ್ನ ಆಸೆ ಹೇಳಿಕೊಂಡರು. ಅಯೋಧ್ಯೆಗೆ(Ayodhya) ಹೊರಟಿದ್ದೇನೆ, ಉದ್ಘಾಟನೆಗೆ ತಲುಪುತ್ತೇನೋ ಇಲ್ಲವೋ ಗೊತ್ತಿಲ್ಲ. ಅಂತೂ ರಾಮನ ದರ್ಶನ ಮಾಡಿನೇ ವಾಪಸ್ ಬರೋದು ಎಂದು ಹೇಳಿಕೊಂಡರು. ಮಂಜುನಾಥ್ ಈ ಮೊದಲು ಕೂಡ ಅಯೋಧ್ಯೆಗೆ ಹೋಗಿದ್ದರಂತೆ. ಕೇವಲ ಅಯೋಧ್ಯ ಮಾತ್ರವಲ್ಲ ಈಗಾಗಲೇ ಮಥುರಾ, ಹರಿದ್ವಾರ, ಕಾಶಿ, ತಿರುಪತಿ ಸೇರಿದಂತೆ ದೇಶದ ಎಲ್ಲಾ ಸುಪ್ರಸಿದ್ಧ ಕ್ಷೇತ್ರಗಳಿಗೆ ಮಂಜುನಾಥ್ ಭೇಟಿ ಕೊಟ್ಟಿದ್ದಾರೆ. ಬೈಕ್, ಸೈಕಲ್‌ಗಳಲ್ಲಿ ದೇಶ ಸಂಚಾರ ನಡೆಸ್ತಿದ್ದ ಮಂಜುನಾಥ್, ಇದೀಗ ಕಾಲಿನ ಬಲ ಕಳೆದುಕೊಂಡ ನಂತರ ವ್ಹೀಲ್‌ಚೇರ್‌ನಲ್ಲಿ ತೀರ್ಥಯಾತ್ರೆ ನಡೆಸ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಐಟಿ ದಾಳಿ..‘ಕೈ’ MP ಮನೆಯಲ್ಲಿ ಕಂತೆ ಕಂತೆ ನೋಟು..! 5 ದಿನ, 150 ಅಧಿಕಾರಿಗಳು, 40 ಹಣ ಎಣಿಸುವ ಮಷಿನ್..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more