ಸಮಾನ ವೇತನ, ಸೇವಾ ಭದ್ರತೆಗಾಗಿ ಆಯುಷ್ ವೈದ್ಯರ ಪಟ್ಟು..!

May 23, 2020, 8:21 AM IST

ಮಂಡ್ಯ(ಮೇ.23): ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡುತ್ತಿಲ್ಲ ಹೀಗಾಗಿ ಕರ್ತವ್ಯ ಸ್ಥಗಿತಗೊಳಿಸಲು ಸಾವಿರಾರು ಆಯುಷ್ ಗುತ್ತಿಗೆ ವೈದ್ಯರು ಚಿಂತನೆ ನಡೆಸುತ್ತಿದ್ದಾರೆ. 

ಆಯುಷ್ ಗುತ್ತಿಗೆ ವೈದ್ಯರು ನಮಗೆ ಆಗುತ್ತಿರುವ ಅನ್ಯಾಯ ಸರಿ ಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ. ಮೇ.05ರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ. 

ರೈತ ಸರ್ಕಾರಿ ನೌಕರನಾಗಿದ್ದರೂ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಕೃಷಿ ಸಾಲ

ದಶಕಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಆದರೆ ಸೂಕ್ತ ವೇತನ ನೀಡುತ್ತಿಲ್ಲ. ಹೀಗಾಗಿ ಈ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಲು ಆಯುಷ್ ಗುತ್ತಿಗೆ ವೈದ್ಯರು ಚಿಂತನೆ ನಡೆಸುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.