ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

Published : Nov 21, 2022, 02:57 PM ISTUpdated : Nov 21, 2022, 03:37 PM IST

ಮಂಡ್ಯ ನಗರದಲ್ಲಿ ಉಸಿರುಗಟ್ಟಿಸುವ ಧೂಳು ಹಾಗೂ ಎಲ್ಲಿ ನೋಡಿದರೂ ಗುಂಡಿಗಳಿರುವ ಅವ್ಯವಸ್ಥೆಯ ರಸ್ತೆಗಳು ಇವೆ.

ಮಂಡ್ಯ: ಮಂಡ್ಯ ನಗರದಲ್ಲಿ ನಾಲ್ಕೈದು ಪ್ರಮುಖ ರಸ್ತೆಗಳಿವೆ. ಆದರೆ ಇದೀಗ ಆ ರಸ್ತೆಗಳೆಲ್ಲಾ ಸಂಪೂರ್ಣ ಗುಂಡಿಮಯವಾಗಿವೆ. ಹೊಸಹಳ್ಳಿ-ಕಾರಸವಾಡಿ ರಸ್ತೆ, ವಿವಿ ರಸ್ತೆ, ನೂರಡಿ ರಸ್ತೆ ಹಾಗೂ ಗುತ್ತಲು ರೋಡ್‌'ಗಳಲ್ಲಿ ಬೃಹತ್ ಆಕಾರದ ಗುಂಡಿಗಳು ಬಿದ್ದಿವೆ. ರಕ್ಕಸ ಗುಂಡಿಗೆ ನಿವೃತ್ತ ಯೋಧನ ಪ್ರಾಣಿ ಪಕ್ಷಿ ಹಾರಿಹೋಗಿದ್ರೂ, ಸಂಬಂಧಪಟ್ಟವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಹೊಸಹಳ್ಳಿ, ಕಾರಸವಾಡಿ ರಸ್ತೆಯಂತೂ ಜನರಿಗೆ ನರಕವೇ ಸರಿ. ಪ್ರತಿ ಹತ್ತು ಹೆಜ್ಜೆಗೂ 20ಕ್ಕೂ ಹೆಚ್ಚು ಗುಂಡಿಗಳು ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಬಸ್‌ಗಳು, ಕೂಲಿ ಕಾರ್ಮಿಕರು, ಹಳ್ಳಿಯಿಂದ ಪಟ್ಟಣಕ್ಕೆ ಬರುವ ಜನರು ಪ್ರಯಾಣಿಸುತ್ತಾರೆ. ಭಾರೀ ವಾಹನಗಳು ಸಂಚರಿಸಿದ್ರಂತು ಇಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿಬಿಡುತ್ತೆ. ಅಷ್ಟರಮಟ್ಟಿಗೆ ಧೂಳು ಆವರಿಸಿಬಿಡುತ್ತದೆ. ನಿತ್ಯ ರಸ್ತೆ ಗುಂಡಿಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿದ್ರೂ ಸ್ಥಳೀಯ ಶಾಸಕ, ನಗರಸಭೆ, PWD ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. 

ಮಂಡ್ಯ: ಸಣ್ಣದೊಂದು ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more