ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

Published : Nov 21, 2022, 02:57 PM ISTUpdated : Nov 21, 2022, 03:37 PM IST

ಮಂಡ್ಯ ನಗರದಲ್ಲಿ ಉಸಿರುಗಟ್ಟಿಸುವ ಧೂಳು ಹಾಗೂ ಎಲ್ಲಿ ನೋಡಿದರೂ ಗುಂಡಿಗಳಿರುವ ಅವ್ಯವಸ್ಥೆಯ ರಸ್ತೆಗಳು ಇವೆ.

ಮಂಡ್ಯ: ಮಂಡ್ಯ ನಗರದಲ್ಲಿ ನಾಲ್ಕೈದು ಪ್ರಮುಖ ರಸ್ತೆಗಳಿವೆ. ಆದರೆ ಇದೀಗ ಆ ರಸ್ತೆಗಳೆಲ್ಲಾ ಸಂಪೂರ್ಣ ಗುಂಡಿಮಯವಾಗಿವೆ. ಹೊಸಹಳ್ಳಿ-ಕಾರಸವಾಡಿ ರಸ್ತೆ, ವಿವಿ ರಸ್ತೆ, ನೂರಡಿ ರಸ್ತೆ ಹಾಗೂ ಗುತ್ತಲು ರೋಡ್‌'ಗಳಲ್ಲಿ ಬೃಹತ್ ಆಕಾರದ ಗುಂಡಿಗಳು ಬಿದ್ದಿವೆ. ರಕ್ಕಸ ಗುಂಡಿಗೆ ನಿವೃತ್ತ ಯೋಧನ ಪ್ರಾಣಿ ಪಕ್ಷಿ ಹಾರಿಹೋಗಿದ್ರೂ, ಸಂಬಂಧಪಟ್ಟವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಹೊಸಹಳ್ಳಿ, ಕಾರಸವಾಡಿ ರಸ್ತೆಯಂತೂ ಜನರಿಗೆ ನರಕವೇ ಸರಿ. ಪ್ರತಿ ಹತ್ತು ಹೆಜ್ಜೆಗೂ 20ಕ್ಕೂ ಹೆಚ್ಚು ಗುಂಡಿಗಳು ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಬಸ್‌ಗಳು, ಕೂಲಿ ಕಾರ್ಮಿಕರು, ಹಳ್ಳಿಯಿಂದ ಪಟ್ಟಣಕ್ಕೆ ಬರುವ ಜನರು ಪ್ರಯಾಣಿಸುತ್ತಾರೆ. ಭಾರೀ ವಾಹನಗಳು ಸಂಚರಿಸಿದ್ರಂತು ಇಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿಬಿಡುತ್ತೆ. ಅಷ್ಟರಮಟ್ಟಿಗೆ ಧೂಳು ಆವರಿಸಿಬಿಡುತ್ತದೆ. ನಿತ್ಯ ರಸ್ತೆ ಗುಂಡಿಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿದ್ರೂ ಸ್ಥಳೀಯ ಶಾಸಕ, ನಗರಸಭೆ, PWD ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. 

ಮಂಡ್ಯ: ಸಣ್ಣದೊಂದು ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more