ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

ಮಂಡ್ಯದಲ್ಲಿ ಯಮರೂಪಿ ರಸ್ತೆ ಗುಂಡಿಗಳು: ಪ್ರಾಣ ಹೋದರೂ 'ಆಡಳಿತ ವರ್ಗ' ಡೋಂಟ್ ಕೇರ್

Published : Nov 21, 2022, 02:57 PM ISTUpdated : Nov 21, 2022, 03:37 PM IST

ಮಂಡ್ಯ ನಗರದಲ್ಲಿ ಉಸಿರುಗಟ್ಟಿಸುವ ಧೂಳು ಹಾಗೂ ಎಲ್ಲಿ ನೋಡಿದರೂ ಗುಂಡಿಗಳಿರುವ ಅವ್ಯವಸ್ಥೆಯ ರಸ್ತೆಗಳು ಇವೆ.

ಮಂಡ್ಯ: ಮಂಡ್ಯ ನಗರದಲ್ಲಿ ನಾಲ್ಕೈದು ಪ್ರಮುಖ ರಸ್ತೆಗಳಿವೆ. ಆದರೆ ಇದೀಗ ಆ ರಸ್ತೆಗಳೆಲ್ಲಾ ಸಂಪೂರ್ಣ ಗುಂಡಿಮಯವಾಗಿವೆ. ಹೊಸಹಳ್ಳಿ-ಕಾರಸವಾಡಿ ರಸ್ತೆ, ವಿವಿ ರಸ್ತೆ, ನೂರಡಿ ರಸ್ತೆ ಹಾಗೂ ಗುತ್ತಲು ರೋಡ್‌'ಗಳಲ್ಲಿ ಬೃಹತ್ ಆಕಾರದ ಗುಂಡಿಗಳು ಬಿದ್ದಿವೆ. ರಕ್ಕಸ ಗುಂಡಿಗೆ ನಿವೃತ್ತ ಯೋಧನ ಪ್ರಾಣಿ ಪಕ್ಷಿ ಹಾರಿಹೋಗಿದ್ರೂ, ಸಂಬಂಧಪಟ್ಟವರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಹೊಸಹಳ್ಳಿ, ಕಾರಸವಾಡಿ ರಸ್ತೆಯಂತೂ ಜನರಿಗೆ ನರಕವೇ ಸರಿ. ಪ್ರತಿ ಹತ್ತು ಹೆಜ್ಜೆಗೂ 20ಕ್ಕೂ ಹೆಚ್ಚು ಗುಂಡಿಗಳು ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಬಸ್‌ಗಳು, ಕೂಲಿ ಕಾರ್ಮಿಕರು, ಹಳ್ಳಿಯಿಂದ ಪಟ್ಟಣಕ್ಕೆ ಬರುವ ಜನರು ಪ್ರಯಾಣಿಸುತ್ತಾರೆ. ಭಾರೀ ವಾಹನಗಳು ಸಂಚರಿಸಿದ್ರಂತು ಇಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿಬಿಡುತ್ತೆ. ಅಷ್ಟರಮಟ್ಟಿಗೆ ಧೂಳು ಆವರಿಸಿಬಿಡುತ್ತದೆ. ನಿತ್ಯ ರಸ್ತೆ ಗುಂಡಿಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿದ್ರೂ ಸ್ಥಳೀಯ ಶಾಸಕ, ನಗರಸಭೆ, PWD ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. 

ಮಂಡ್ಯ: ಸಣ್ಣದೊಂದು ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more