ಮಂಡ್ಯದ ಅನ್ನದಾತನ ಬದುಕು ಮೂರಾಬಟ್ಟೆ: ಯುವ ರೈತನನ್ನು ಕಳೆದುಕೊಂಡು ಬೀದಿಗೆ ಬಿದ್ದ ಹೆತ್ತವರು !

ಮಂಡ್ಯದ ಅನ್ನದಾತನ ಬದುಕು ಮೂರಾಬಟ್ಟೆ: ಯುವ ರೈತನನ್ನು ಕಳೆದುಕೊಂಡು ಬೀದಿಗೆ ಬಿದ್ದ ಹೆತ್ತವರು !

Published : Aug 10, 2023, 12:52 PM IST

ಆ ಕುಟಂಬಕ್ಕೆ ಆಸರೆಯಾಗಿದ್ದ ಮಗ ಮರೆಯಾದಾಗ ಒಂದೇ ಸಲ ತಂದೆ-ತಾಯಿಗೆ ಬರಸಿಡಿಲು ಬಂಡಿದಂತಾಗುತ್ತದೆ. ಇಷ್ಟಕ್ಕೂ ಆ ಮಾದರಿ ರೈತ ಏನಾದ? ಆ ಯುವಕನ ಕುಟುಂಬಕ್ಕೆ ಬೀದಿಗೆ ಬಂದಿದ್ದಾದರೋ ಯಾಕೆ? ಯುವಕನ ಹೆತ್ತವರು ಕಚೇರಿಯಿಂದ ಕಚೇರಿಗೆ ಅಲೆಯುತ್ತೀರೋದಾದ್ರೂ ಯಾಕೆ? ಬನ್ನಿ ಸ್ಟೋರಿ ನೋಡೋಣ.

ಆತ 25 ವರ್ಷದ ಯುವ ರೈತ. ಕೃಷಿ ಮಾಡಿ ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ. ಆದರೆ ಸಾಲ, ಸೋಲ ಮಾಡಿ ಬೆಳೆದಿದ್ದ ಬೆಳೆ ಕೈ ಕೊಟ್ಟಿತ್ತು. ಲಕ್ಷಾಂತರ ರೂಪಾಯಿ ಸಾಲದ ಸುಳಿಗೆ ಸಿಲುಕಿದ ಆತ ಕಡೆಗೆ ಆತ್ಮಹತ್ಯೆಗೆ(suicide) ಶರಣಾಗಿದ್ದ. ಇತ್ತ ಮಗನನ್ನು ಕಳೆದುಕೊಂಡು ಸಾಲದ ಹೊರೆ ಹೊತ್ತ ಇಡೀ ಕುಟುಂಬ ಬೀದಿಗೆ ಬಿದ್ದಿದೆ. ಮೃತ ರೈತನ(Farmer) ಕುಟುಂಬಕ್ಕೆ ಪರಿಹಾರ ಕೊಡಬೇಕಿದ್ದ ಅಧಿಕಾರಗಳು ವಿಳಂಬ ಅರ್ಜಿ ಎಂಬ ಕಾರಣ ನೀಡಿ ಮಾನವೀಯತೆ ಮರೆತಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮೃತ ರೈತನ ಪೋಷಕರು ಕಚೇರಿಯಿಂದ ಕಚೇರಿಗೆ ಅಲೆಯುತ್ತಾ ಪರಿಹಾರಕ್ಕಾಗಿ ಅಂಗಲಾಚುತ್ತಿದ್ದಾರೆ. ರೈತನ ಮನೆ ಬಾಗಿಲಿಗೆ ಅಧಿಕಾರಗಳು ಹೋಗಬೇಕು, ಸರ್ಕಾರದ ಸೌಲಭ್ಯಗಳು ನಿರಾಯಾಸವಾಗಿ ಅನ್ನದಾತನಿಗೆ ತಲುಪಬೇಕು ಅನ್ನೋದು ಕೇವಲ ಭಾಷಣಕ್ಕೆ ಸೀಮಿತವಾಗಿದೆ. ಯಾವೊಬ್ಬ ಅಧಿಕಾರಿ ಕೂಡ ಸರ್ಕಾರದ ಯೋಜನೆಗಳನ್ನು ರೈತನಿಗೆ ತಲುಪಿಸುವ ಕೆಲಸ ಮಾಡೋದಿಲ್ಲ. ಅದೇ ರೀತಿ ಮಂಡ್ಯದಲ್ಲೂ(Mandya) ಕೂಡ ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ ಸಾಂತ್ವನ ಪರಿಹಾರ ನೀಡಲು ಅಧಿಕಾರಗಳು ಹಿಂದೇಟು ಹಾಕ್ತಿದ್ದಾರೆ. ವಿಳಂಬ ಅರ್ಜಿ ಎಂಬ ಕಾರಣಕ್ಕೆ ನೊಂದ ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದ್ದಾರೆ.

2022ರ ಮೇ 8ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ 25 ವರ್ಷದ ಯುವ ರೈತ ಸಂದೇಶ್ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದರು. ಬೆಂಗಳೂರು ಬಿಟ್ಟು ತಮಗಿದ್ದ 3.5 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿ ಬದುಕು ಕಟ್ಟಿಕೊಳ್ಳಲು ಸಂದೇಶ್ ಮುಂದಾಗಿದ್ದ. ಸಾಲ ಮಾಡಿ ಕೊರೆಸಿದ್ದ ಬೋರ್ವೆಲ್ ಕೈಕೊಟ್ಟಿತ್ತು. ಮತ್ತೊಂದೆಡೆ ರೇಷ್ಮೆ, ರಾಗಿ, ಜೋಳದ ಬೆಳೆ ಕೈಗೆ ಬಾರದೇ ತೀವ್ರ ನಷ್ಟವಾಗಿತ್ತು. ಸಂದೇಶ್ ವ್ಯವಸಾಯಕ್ಕಾಗಿ ಕಳೆದ 4 ವರ್ಷಗಳಲ್ಲಿ ವಿವಿಧ ಬ್ಯಾಂಕ್ಗಳಲ್ಲಿ  6-7 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇತ್ತ ಕೃಷಿಯೂ ಕೈ ಹಿಡಿಯದೆ, ಸಾಲದ ಹೊರೆ ಹೆಚ್ಚಾಗಿದ್ದರಿಂದ ಆರ್ಥಿಕವಾಗಿ ಹಿನ್ನಡೆ ಅನುಭವಿಸಿದ್ದ ಸಂದೇಶ್ ಜಮೀನಿನಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ರು. ಒಂದು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು.

ಇದನ್ನೂ ವೀಕ್ಷಿಸಿ:  ತದ್ವನಂ ಸಂಸ್ಥೆಯ ಹಿಂದಿನ ರೂವಾರಿ ಯಾರು ಗೊತ್ತಾ ?: ಹಳ್ಳಿಯಿಂದ ದೆಲ್ಲಿವರೆಗೆ ಆಹಾರೋತ್ಷನ್ನಗಳ ಮಾರಾಟ !

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more