ಮಂಡ್ಯ :  ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

ಮಂಡ್ಯ : ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

Kannadaprabha News   | Asianet News
Published : Sep 10, 2021, 03:29 PM IST

ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

  ಮಂಡ್ಯ (ಸೆ.10):  ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

ನದಿಯಲ್ಲಿ ಈಜುವಾಗ ಮೊಸಳೆ ದಾಳಿಯಿಂದ ರೈತ ಸಾವು

ಇದೀಗ ಮತ್ತೊಂದು ಭಾರೀ ಗಾತ್ರದ ಮೊಸಳೆ ವಿರಿಜಾ ನಾಲೆಯ ಪಕ್ಕದಲ್ಲೇ ರಾತ್ರಿ ವೇಳೆ ರೋಡಿಗೆ ಬಂದು ಆಹಾರಕ್ಕಾಗಿ ಅಲೆದಾಟು ನಡೆಸಿದ್ದು, ಪ್ರವಾಸಿಗರೊಬ್ಬರು ಕಾರಿನಲ್ಲಿ ಬರುವಾಗ ರಸ್ತೆಯಲ್ಲಿ ಮೊಸಳೆ ಸಂಚರಿಸಿವುದು ಕಂಡಿದೆ. ಆ ಪ್ರವಾಸಿಗರು ಮೊಸಳೆಯ ಓಡಾಟವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ಈ ಮೊಸಳೆಗಳು ಪಕ್ಕದ ರಂಗನತಿಟ್ಟು ಪಕ್ಷಿಧಾಮದಿಂದ ಅಹಾರ ಅರಸಿ ಬಂದಿರಬೇಕು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದು ನದಿ ಬಿಟ್ಟು ನಾಲೆ ಮತ್ತು ಬಯಲಿಗೆ ಬಂದಿರೋ ಈ ಮೊಸಳೆಗಳ ಸೆರೆಗೆ ಬೋನ್ ಕೂಡ ಇಡಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್