ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

Suvarna News   | Asianet News
Published : Feb 08, 2020, 01:45 PM ISTUpdated : Feb 08, 2020, 04:04 PM IST

ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಮಂಗಳೂರು(ಫೆ.08): ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಬಸ್‌ ಸ್ಟೆಸ್‌ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುವುದು ಸಾಮಾನ್ಯ. ಆದರೆ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ ಹಿಂಭಾಗದಲ್ಲಿ ಕುಳಿತಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಚಲಿಸುವ ಬಸ್‌ನಲ್ಲಿ ಹೀಗೆ ಕುಳಿತು ತೆರಳುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.

ಭಯಂಕರ ಪೆಡಂಭೂತ ಬಾಲಕಿಯ ಬ್ಲಡ್‌ ಕ್ಯಾನ್ಸರ್ ಚಿಕಿತ್ಸೆಗೆ ಕೊಟ್ಟಿದ್ದು 3 ಲಕ್ಷ..!

ಆಯ ತಪ್ಪಿ ಬಸ್ಸಿನಿಂದ ಬಿದ್ದರೆ ಹಿಂಭಾಗದಲ್ಲಿ ಬರುವ ವಾಹನಗಳ ಅಡಿಗೆ ಬೀಳುವ ಸಾಧ್ಯತೆ ಇರುವುದರಿಂದ ಇದು ಅಪಾಯಕಾರಿ. ಬಾಲಕ ಈ ರೀತಿ ನೇತಾಡಿರುವುದು ಬಸ್ ಚಾಲಕನಿಗೆ ಗೊತ್ತಿದ್ದು ನಡೆದಿದೆಯೋ ಅಥವಾ ಈ ಬಗ್ಗೆ ತಿಳಿದಿರಲಿಲ್ಲವೋ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಗೊತ್ತಿಲ್ಲದೆಯೋ ಅಲ್ಲದೆ, ಬಸ್ಸಿನಲ್ಲಿ ಫುಲ್ ರಶ್ ಇದ್ದುದರಿಂದ ಹೀಗೆ ಹಿಂಭಾಗದಲ್ಲಿ ಕುಳಿತಿದ್ದಾನೆಯೇ ಗೊತ್ತಿಲ್ಲ. ಈ ವಿಡಿಯೋ ಮಾತ್ರ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಕಾಲೇಜಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?