ಕಾರು ಡಿಕ್ಕಿ ಹೊಡೆದ ರಭಸಕ್ಕೆ ದೂರ ಚಿಮ್ಮಿದ ಮಹಿಳೆ: ಅಪಘಾತದ ದೃಶ್ಯ ವೈರಲ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ದೂರ ಚಿಮ್ಮಿದ ಮಹಿಳೆ: ಅಪಘಾತದ ದೃಶ್ಯ ವೈರಲ್

Published : Nov 03, 2022, 08:32 PM IST

ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿವೆ.

ಮಂಗಳೂರು: ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿವೆ. ಮೂಲ್ಕಿ ಮೂಡಬಿದಿರೆ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲೇ ಘಟನಾ ಸ್ಥಳದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸುರತ್ಕಲ್ ನಿಂದ ಮೂಡಬಿದ್ರಿಗೆ ತೆರಳುತ್ತಿದ್ದ ಬ್ರೀಝಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಪಕ್ಷಿಕೆರೆ ನಿವಾಸಿ ಜಯಂತಿ ಶೆಟ್ಟಿ (50) ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕಾರಿನಲ್ಲಿದ್ದ ಚಾಲಕ ಅಬ್ದುಲ್ ಖಾದರ್ (65) ಕೌಸರ್ (46), ರಿದಾ (16), ರಝ್ಮಿ (18) ಎಂಬುವವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾರು ಅಪಘಾತದಿಂದ ಗಂಭೀರ ಗಾಯಗೊಂಡ ಜಯಂತಿ ಶೆಟ್ಟಿ ಅವರು ವಾರದ ಸಂತೆಗೆ ತೆರಳಿ ತರಕಾರಿ ತೆಗೆದುಕೊಂಡು ಮನೆಗೆ ಮರಳುತ್ತಿದ್ದಾಗ ಕಿನ್ನಿಗೋಳಿ ರಸ್ತೆಯಲ್ಲಿ ಈ ಅನಾಹುತ ಸಂಭವಿಸಿದೆ. ಕಾರಿ ಡಿಕ್ಕಿಯಾದ ರಭಸಕ್ಕೆ ಅವರು ದೂರ ಚಿಮ್ಮಿ ಬಿದ್ದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more