ಕಾರು ಡಿಕ್ಕಿ ಹೊಡೆದ ರಭಸಕ್ಕೆ ದೂರ ಚಿಮ್ಮಿದ ಮಹಿಳೆ: ಅಪಘಾತದ ದೃಶ್ಯ ವೈರಲ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ದೂರ ಚಿಮ್ಮಿದ ಮಹಿಳೆ: ಅಪಘಾತದ ದೃಶ್ಯ ವೈರಲ್

Published : Nov 03, 2022, 08:32 PM IST

ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿವೆ.

ಮಂಗಳೂರು: ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿವೆ. ಮೂಲ್ಕಿ ಮೂಡಬಿದಿರೆ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲೇ ಘಟನಾ ಸ್ಥಳದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸುರತ್ಕಲ್ ನಿಂದ ಮೂಡಬಿದ್ರಿಗೆ ತೆರಳುತ್ತಿದ್ದ ಬ್ರೀಝಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಪಕ್ಷಿಕೆರೆ ನಿವಾಸಿ ಜಯಂತಿ ಶೆಟ್ಟಿ (50) ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕಾರಿನಲ್ಲಿದ್ದ ಚಾಲಕ ಅಬ್ದುಲ್ ಖಾದರ್ (65) ಕೌಸರ್ (46), ರಿದಾ (16), ರಝ್ಮಿ (18) ಎಂಬುವವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾರು ಅಪಘಾತದಿಂದ ಗಂಭೀರ ಗಾಯಗೊಂಡ ಜಯಂತಿ ಶೆಟ್ಟಿ ಅವರು ವಾರದ ಸಂತೆಗೆ ತೆರಳಿ ತರಕಾರಿ ತೆಗೆದುಕೊಂಡು ಮನೆಗೆ ಮರಳುತ್ತಿದ್ದಾಗ ಕಿನ್ನಿಗೋಳಿ ರಸ್ತೆಯಲ್ಲಿ ಈ ಅನಾಹುತ ಸಂಭವಿಸಿದೆ. ಕಾರಿ ಡಿಕ್ಕಿಯಾದ ರಭಸಕ್ಕೆ ಅವರು ದೂರ ಚಿಮ್ಮಿ ಬಿದ್ದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more