Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬೆ ಜಾತ್ರಾ ಮಹೋತ್ಸವ

Uttara Kannada: ಶಿರಸಿಯಲ್ಲಿ ಸಂಭ್ರಮದ ಮಾರಿಕಾಂಬೆ ಜಾತ್ರಾ ಮಹೋತ್ಸವ

Published : Mar 16, 2022, 10:54 AM IST

*  ದಕ್ಷಿಣ ಭಾರತದಲ್ಲೇ ಅತೀ ದೊಡ್ಡ ಜಾತ್ರೆ ಎಂದು ಹೆಗ್ಗಳಿಕೆ
*  ಶಿರಸಿಯ ಶಕ್ತಿ ದೇವತೆ ಮಾರಿಕಾಂಬೆಯ ಜಾತ್ರಾ ಮಹೋತ್ಸವ
*  ಮಾ. 15 ರಿಂದ 23ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವ
 

ಕಾರವಾರ(ಮಾ.16):  ಉತ್ತರ ಕನ್ನಡ ಜಿಲ್ಲೆಯ ಮಲೆನಾಡ ಮಡಿಲಲ್ಲಿ ನೆಲೆ ನಿಂತಿರುವ ಶಕ್ತಿ ದೇವತೆ ಮಾರಿಕಾಂಬಾ ದೇವಿಯ ಜಾತ್ರೆ ನಿನ್ನೆ(ಮಂಗಳವಾರ) ಯಿಂದ ಆರಂಭವಾಗಿದೆ.‌ ದಕ್ಷಿಣ ಭಾರತದಲ್ಲೇ ಅತೀ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಮಾರಿಕಾಂಬಾ ಜಾತ್ರೆ ಮಾರ್ಚ್ 15ರಿಂದ 23ರವರೆಗೆ ನಡೆಯಲಿದೆ. ನಿನ್ನೆ ರಾತ್ರಿ ದೇವಿಯ ಕಲ್ಯಾಣೋತ್ಸವ ನಡೆದಿತ್ತು. ಇಂದು ಮಾರಿಕಾಂಬೆ ಗರ್ಭಗುಡಿಯಿಂದ ಹೊರಬಂದು ಗದ್ದುಗೆಗೆ ಏರಲಿದ್ದು, ಬಳಿಕ ರಥೋತ್ಸವ ನಡೆಯಲಿದೆ. ನಂತರ 5 ದಿನಗಳ ಕಾಲ ಸೇವಾ ಕಾರ್ಯಗಳು ಜರಗಲಿದ್ದು, 23ರಂದು ದೇವಿ ಮತ್ತೆ ಗದ್ದೆಯಿಂದ ಗರ್ಭಗುಡಿಗೆ ನಿರ್ಗಮಿಸುತ್ತಾಳೆ. 

ಈಗಾಗಲೇ ದೇವಿಯ ರಥೋತ್ಸವದವರೆಗಿನ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳು ಅಚ್ಚುಕಟ್ಟಾಗಿ ನಡೆದಿದ್ದು, ದೇವಿ ಗದ್ದುಗೆಗೆ ಏರುವ ಮಂಟಪವೂ ಕೂಡಾ ಉತ್ತಮವಾಗಿ ರಚನೆಯಾಗಿದೆ. ಕಳೆದ ನೂರಾರು ವರ್ಷಗಳಿಂದ ಪ್ರತಿ ಜಾತ್ರೆಗೂ ದೇವಿ ಮೆರವಣಿಗೆಗೆ ಮರದ‌ ನೂತನ ರಥ ನಿರ್ಮಾಣ ಮಾಡಲಾಗುತ್ತಿತ್ತು. ಆದ್ರೆ, ಇತ್ತೀಚಿಗೆ ಮರಗಳನ್ನು ಉಳಿಸುವ ನಿಟ್ಟಿನಲ್ಲಿ ಒಂದೆರಡು ಮರಗಳ ದಿಮ್ಮಿಗಳನ್ನು ತಂದು ದೇವಾಲಯದ ಮುಂದಿಟ್ಟು ಪೂಜೆ ಪುನಸ್ಕಾರ ನಡೆಸಿದ ಬಳಿಕ ಅದರ ಸಣ್ಣ ತುಂಡನ್ನು ದೇವಳದ ರಥದ ಗಾಲಿ ಅಥವಾ ಮುಂಭಾಗಕ್ಕೆ ಬಳಸಾಗುತ್ತದೆ. ಇದಕ್ಕೆ ದೇವಸ್ಥಾನದ ಬಾಬುದಾರರು ಹಾಗೂ ಪ್ರಧಾನ ಅರ್ಚಕರು ಮೊದಲೇ ನಿಗದಿಪಡಿಸಿದ ಮರಕ್ಕೆ ಕಚ್ಚು ಹಾಕಿ ಬಳಿಕ ತುಂಡರಿಸಿ ರಥಕ್ಕೆ ಉಪಯೋಗಿಸಲಾಗುತ್ತದೆ. ಸದ್ಯ ಎಲ್ಲಾ ಧಾರ್ಮಿಕ ಕೈಂಕರ್ಯಗಳು ಸಂಪನ್ನಗೊಂಡಿದ್ದು, ಸಂಭ್ರಮದ ಜಾತ್ರಾ ಮಹೋತ್ಸವಕ್ಕಾಗಿ ಸಕಲ ಸಿದ್ದತೆಗಳೂ ಪೂರ್ಣಗೊಂಡಿದೆ. 

Karwar: ಜನಪ್ರತಿನಿಧಿಗಳು, ಮೀನುಗಾರರ ಮಧ್ಯೆ ವಾಗ್ಯುದ್ಧ: ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆ..!

ಶಿರಸಿಯ ಹೃದಯ ಭಾಗವಾಗಿರುವ ಬಿಡಕಿ ಬೈಲಲ್ಲಿ ದೇವಿಯ ಗದ್ದುಗೆಗೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಒಂದೆಡೆ ದೇವಿಯ ಜಾತ್ರೆಯ ಧಾರ್ಮಿಕ ಕೈಂಕರ್ಯಗಳು ನಡೆಯುತ್ತಿದ್ರೆ, ಮತ್ತೊಂದೆಡೆ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉತ್ತಮ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದರೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪೊಲೀಸ್ ಇಲಾಖೆಯ ಪ್ರಕಾರ, ಈ ಬಾರಿ ಜಾತ್ರೆಗೆ 8ರಿಂದ 9 ಲಕ್ಷ ಭಕ್ತರು ಆಗಮಿಸಲಿದ್ದು, ಜಾತ್ರೆಯಲ್ಲಿ ಯಾವುದೇ ಗದ್ದಲ ಹಾಗೂ ಸಂಚಾರಿ ಸಮಸ್ಯೆಗೆ ಆಸ್ಪದ ನೀಡಬಾರದು ಎಂಬ ನಿಟ್ಟಿನಲ್ಲಿ 2 ಕೆಎಸ್‌ಆರ್‌ಪಿ  ತುಕಡಿ ಹಾಗೂ 4 ಡಿಎಆರ್ ತುಕಡಿಗಳ ಸಹಿತ 700ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇನ್ನು ಮಹಿಳೆಯರು, ಮಕ್ಕಳು ಹಾಗೂ ವಿಶೇಷ ಚೇತನರಿಗೆ ದರ್ಶನಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ತಲಾ 20-20 ಮಹಿಳಾ ಮತ್ತು ಪುರುಷ ಪೊಲೀಸ್ ಸಿಬ್ಬಂದಿಯ ಎರಡು ತಂಡಗಳ ರಚನೆ ಮಾಡಲಾಗಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more