ಬೆಳಗಾವಿ: ನಿಲ್ಲದ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಾರ್

Aug 27, 2020, 1:17 PM IST

ಬೆಳಗಾವಿ(ಆ.27): ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಒತ್ತಾಯಿಸಿ ಇಂದು(ಗುರುವಾರ)ವಿವಿಧ ಸಂಘಟನೆಗಳಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಬೆಂಗಳೂರು, ಬೀದರ್‌, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. 

ಬೆಳಗಾವಿ: ಮನೆ ಬಿದ್ದು 1 ವರ್ಷವಾದ್ರೂ ಸಿಕ್ಕಿಲ್ಲ, ದಿನನಿತ್ಯ ಕಣ್ಣೀರಲ್ಲಿ ಕೈತೊಳೆಯುತ್ತಿರುವ ವೃದ್ಧೆ

ಈ ಸಂಬಂಧ ನಗರದ ಸುವರ್ಣ ಸೌಧಕ್ಕೆ ಮುತ್ತಿಗೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸುವರ್ಣ ಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆ ಇದೆ.