ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

Published : Nov 22, 2023, 09:56 AM IST

ಆ ಶಾಲೆಯ ಕಟ್ಟಡ ಕಟ್ಟಿ 4 ದಶಕಗಳಾಗುತ್ತ ಬಂದಿದೆ. ಆದರೆ ಶಾಲೆ ಸಮಸ್ಯೆಗಳ ಆಗರವಾಗಿದ್ದು, ಸಾಯಂಕಾಲವಾದರೆ ಪುಂಡ ಪೋಕರಿಗಳ ಅಡ್ಡೆಯಾಗುತ್ತೆ. ಏನದು ಅನ್ನೋದರ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ..
 

ಇದು ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಮತ್ತಿಕೆರೆ ಬಿಬಿಎಂಪಿ ಸರ್ಕಾರಿ ಬಾಲಕಿರ ಪ್ರೌಢ ಶಾಲೆ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪರಿಸ್ಥಿತಿ. ಶಾಲಾ(School) ಕಟ್ಟಡ ಕಟ್ಟಿ 40 ವರ್ಷಗಳೇ ಕಳೆದಿದ್ದು.. 500ಕ್ಕೂ ಅಧಿಕ ವಿದ್ಯಾರ್ಥಿನಿಯರು(Students) ವ್ಯಾಸಂಗ ಮಾಡುತ್ತಿದ್ದಾರೆ. ಆದ್ರೆ ಶಾಲೆಯ ಗೇಟ್ ಬಿದ್ದು ಹೋಗಿ ವರ್ಷಗಳೇ ಕಳೆದಿವೆ. ಶಾಲಾ ಕೊಠಡಿಯ ಮೇಲ್ಛಾವಣಿಯ ಸೀಲಿಂಗ್ ಕಿತ್ತು ಹೋಗಿದ್ದು, ಕೆಳಗೆ ಕುಳಿತು ಮಕ್ಕಳು ಪಾಠ ಕೇಳುವಂತಾಗದೆ. ಶಾಲೆಯ ಗೇಟ್ ಇಲ್ಲದ ಪರಿಣಾಮ ಸಾಯಂಕಾಲ ಆದರೆ ಸಾಕು ಪುಂಡ - ಪೋಕರಿಗಳು ಇಲ್ಲಿಗೆ ಬಂದು ಮಧ್ಯಪಾನ(Drink), ಧೂಮಪಾನ ಮಾಡುತ್ತಾರೆ. ಅಷ್ಟೇ ಅಲ್ಲದೇ ಶಾಲಾ ಸಮಯದಲ್ಲೂ ಅದೆಷ್ಟೋ ಬಾರಿ ಗಲಾಟೆ ಕೂಡ ಮಾಡಿದ್ದಾರಂತೆ. ಇನ್ನೊಂದೆಡೆ ಹೈಸ್ಕೂಲ್ ಜೊತೆಗೆ ಕಾಲೇಜು ಕೂಡ ಇರುವ ಕಾರಣ ಇದೇ ಶಾಲಾ ಕಟ್ಟಡ ಮೇಲೆ ಕಾಲೇಜು ಕಟ್ಟಡ ಕಟ್ಟಲು ಬಿವಿಎಂಪಿ ಮುಂದಾಗಿದೆಯಂತೆ. ಈಗಿರುವ ಕಟ್ಟಡ ಮಳೆಗಾಲದಲ್ಲಿ ಸೋರಿಕೆ ಆಗುತ್ತದೆ. ಸಿಲಿಂಗ್ ಕೂಡ ಕಿತ್ತುಕೊಂಡು ಬರುತ್ತಿದೆ. ಹೀಗಾಗಿ ಕಟ್ಟಡ ಬಗ್ಗೆ ಸರಿಯಾದ ಪರಿಶೀಲನೆ ಮಾಡಿ ಕಟ್ಟಡ ಕಟ್ಟಬೇಕು. ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಕೂಡ ಮಾಡಲಾಗಿದೆ . ಆದ್ರು ಕೂಡ ಯಾರೊಬ್ಬರು ಇತ್ತ ಗಮನ ಹರಿಸುತ್ತಿಲ್ಲ. ಈ ಶಾಲಾ ಮಕ್ಕಳಿಗೆ ಸುರಕ್ಷತೆ ಇಲ್ಲ.. ಮೇಲ್ಛಾವಣಿ ಭಾಗ ಕುಸಿದು ಬೀಳುತ್ತಿರುವುದರಿಂದ ಜೀವ ಭಯದಲ್ಲೆ ಪಾಠ ಕಲಿಯುವಂತಾಗಿದೆ. ಇನ್ನಾದ್ರೂ  ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ವ್ಯಥೆ ಕಾಡಲಿದ್ದು, ದಾಂಪತ್ಯದಲ್ಲಿ ಮನಸ್ತಾಪ ಬರಲಿದೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more