ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

Published : Nov 22, 2023, 09:56 AM IST

ಆ ಶಾಲೆಯ ಕಟ್ಟಡ ಕಟ್ಟಿ 4 ದಶಕಗಳಾಗುತ್ತ ಬಂದಿದೆ. ಆದರೆ ಶಾಲೆ ಸಮಸ್ಯೆಗಳ ಆಗರವಾಗಿದ್ದು, ಸಾಯಂಕಾಲವಾದರೆ ಪುಂಡ ಪೋಕರಿಗಳ ಅಡ್ಡೆಯಾಗುತ್ತೆ. ಏನದು ಅನ್ನೋದರ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ..
 

ಇದು ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಮತ್ತಿಕೆರೆ ಬಿಬಿಎಂಪಿ ಸರ್ಕಾರಿ ಬಾಲಕಿರ ಪ್ರೌಢ ಶಾಲೆ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪರಿಸ್ಥಿತಿ. ಶಾಲಾ(School) ಕಟ್ಟಡ ಕಟ್ಟಿ 40 ವರ್ಷಗಳೇ ಕಳೆದಿದ್ದು.. 500ಕ್ಕೂ ಅಧಿಕ ವಿದ್ಯಾರ್ಥಿನಿಯರು(Students) ವ್ಯಾಸಂಗ ಮಾಡುತ್ತಿದ್ದಾರೆ. ಆದ್ರೆ ಶಾಲೆಯ ಗೇಟ್ ಬಿದ್ದು ಹೋಗಿ ವರ್ಷಗಳೇ ಕಳೆದಿವೆ. ಶಾಲಾ ಕೊಠಡಿಯ ಮೇಲ್ಛಾವಣಿಯ ಸೀಲಿಂಗ್ ಕಿತ್ತು ಹೋಗಿದ್ದು, ಕೆಳಗೆ ಕುಳಿತು ಮಕ್ಕಳು ಪಾಠ ಕೇಳುವಂತಾಗದೆ. ಶಾಲೆಯ ಗೇಟ್ ಇಲ್ಲದ ಪರಿಣಾಮ ಸಾಯಂಕಾಲ ಆದರೆ ಸಾಕು ಪುಂಡ - ಪೋಕರಿಗಳು ಇಲ್ಲಿಗೆ ಬಂದು ಮಧ್ಯಪಾನ(Drink), ಧೂಮಪಾನ ಮಾಡುತ್ತಾರೆ. ಅಷ್ಟೇ ಅಲ್ಲದೇ ಶಾಲಾ ಸಮಯದಲ್ಲೂ ಅದೆಷ್ಟೋ ಬಾರಿ ಗಲಾಟೆ ಕೂಡ ಮಾಡಿದ್ದಾರಂತೆ. ಇನ್ನೊಂದೆಡೆ ಹೈಸ್ಕೂಲ್ ಜೊತೆಗೆ ಕಾಲೇಜು ಕೂಡ ಇರುವ ಕಾರಣ ಇದೇ ಶಾಲಾ ಕಟ್ಟಡ ಮೇಲೆ ಕಾಲೇಜು ಕಟ್ಟಡ ಕಟ್ಟಲು ಬಿವಿಎಂಪಿ ಮುಂದಾಗಿದೆಯಂತೆ. ಈಗಿರುವ ಕಟ್ಟಡ ಮಳೆಗಾಲದಲ್ಲಿ ಸೋರಿಕೆ ಆಗುತ್ತದೆ. ಸಿಲಿಂಗ್ ಕೂಡ ಕಿತ್ತುಕೊಂಡು ಬರುತ್ತಿದೆ. ಹೀಗಾಗಿ ಕಟ್ಟಡ ಬಗ್ಗೆ ಸರಿಯಾದ ಪರಿಶೀಲನೆ ಮಾಡಿ ಕಟ್ಟಡ ಕಟ್ಟಬೇಕು. ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಕೂಡ ಮಾಡಲಾಗಿದೆ . ಆದ್ರು ಕೂಡ ಯಾರೊಬ್ಬರು ಇತ್ತ ಗಮನ ಹರಿಸುತ್ತಿಲ್ಲ. ಈ ಶಾಲಾ ಮಕ್ಕಳಿಗೆ ಸುರಕ್ಷತೆ ಇಲ್ಲ.. ಮೇಲ್ಛಾವಣಿ ಭಾಗ ಕುಸಿದು ಬೀಳುತ್ತಿರುವುದರಿಂದ ಜೀವ ಭಯದಲ್ಲೆ ಪಾಠ ಕಲಿಯುವಂತಾಗಿದೆ. ಇನ್ನಾದ್ರೂ  ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ವ್ಯಥೆ ಕಾಡಲಿದ್ದು, ದಾಂಪತ್ಯದಲ್ಲಿ ಮನಸ್ತಾಪ ಬರಲಿದೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more