ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

Published : Nov 22, 2023, 09:56 AM IST

ಆ ಶಾಲೆಯ ಕಟ್ಟಡ ಕಟ್ಟಿ 4 ದಶಕಗಳಾಗುತ್ತ ಬಂದಿದೆ. ಆದರೆ ಶಾಲೆ ಸಮಸ್ಯೆಗಳ ಆಗರವಾಗಿದ್ದು, ಸಾಯಂಕಾಲವಾದರೆ ಪುಂಡ ಪೋಕರಿಗಳ ಅಡ್ಡೆಯಾಗುತ್ತೆ. ಏನದು ಅನ್ನೋದರ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ..
 

ಇದು ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಮತ್ತಿಕೆರೆ ಬಿಬಿಎಂಪಿ ಸರ್ಕಾರಿ ಬಾಲಕಿರ ಪ್ರೌಢ ಶಾಲೆ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪರಿಸ್ಥಿತಿ. ಶಾಲಾ(School) ಕಟ್ಟಡ ಕಟ್ಟಿ 40 ವರ್ಷಗಳೇ ಕಳೆದಿದ್ದು.. 500ಕ್ಕೂ ಅಧಿಕ ವಿದ್ಯಾರ್ಥಿನಿಯರು(Students) ವ್ಯಾಸಂಗ ಮಾಡುತ್ತಿದ್ದಾರೆ. ಆದ್ರೆ ಶಾಲೆಯ ಗೇಟ್ ಬಿದ್ದು ಹೋಗಿ ವರ್ಷಗಳೇ ಕಳೆದಿವೆ. ಶಾಲಾ ಕೊಠಡಿಯ ಮೇಲ್ಛಾವಣಿಯ ಸೀಲಿಂಗ್ ಕಿತ್ತು ಹೋಗಿದ್ದು, ಕೆಳಗೆ ಕುಳಿತು ಮಕ್ಕಳು ಪಾಠ ಕೇಳುವಂತಾಗದೆ. ಶಾಲೆಯ ಗೇಟ್ ಇಲ್ಲದ ಪರಿಣಾಮ ಸಾಯಂಕಾಲ ಆದರೆ ಸಾಕು ಪುಂಡ - ಪೋಕರಿಗಳು ಇಲ್ಲಿಗೆ ಬಂದು ಮಧ್ಯಪಾನ(Drink), ಧೂಮಪಾನ ಮಾಡುತ್ತಾರೆ. ಅಷ್ಟೇ ಅಲ್ಲದೇ ಶಾಲಾ ಸಮಯದಲ್ಲೂ ಅದೆಷ್ಟೋ ಬಾರಿ ಗಲಾಟೆ ಕೂಡ ಮಾಡಿದ್ದಾರಂತೆ. ಇನ್ನೊಂದೆಡೆ ಹೈಸ್ಕೂಲ್ ಜೊತೆಗೆ ಕಾಲೇಜು ಕೂಡ ಇರುವ ಕಾರಣ ಇದೇ ಶಾಲಾ ಕಟ್ಟಡ ಮೇಲೆ ಕಾಲೇಜು ಕಟ್ಟಡ ಕಟ್ಟಲು ಬಿವಿಎಂಪಿ ಮುಂದಾಗಿದೆಯಂತೆ. ಈಗಿರುವ ಕಟ್ಟಡ ಮಳೆಗಾಲದಲ್ಲಿ ಸೋರಿಕೆ ಆಗುತ್ತದೆ. ಸಿಲಿಂಗ್ ಕೂಡ ಕಿತ್ತುಕೊಂಡು ಬರುತ್ತಿದೆ. ಹೀಗಾಗಿ ಕಟ್ಟಡ ಬಗ್ಗೆ ಸರಿಯಾದ ಪರಿಶೀಲನೆ ಮಾಡಿ ಕಟ್ಟಡ ಕಟ್ಟಬೇಕು. ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಕೂಡ ಮಾಡಲಾಗಿದೆ . ಆದ್ರು ಕೂಡ ಯಾರೊಬ್ಬರು ಇತ್ತ ಗಮನ ಹರಿಸುತ್ತಿಲ್ಲ. ಈ ಶಾಲಾ ಮಕ್ಕಳಿಗೆ ಸುರಕ್ಷತೆ ಇಲ್ಲ.. ಮೇಲ್ಛಾವಣಿ ಭಾಗ ಕುಸಿದು ಬೀಳುತ್ತಿರುವುದರಿಂದ ಜೀವ ಭಯದಲ್ಲೆ ಪಾಠ ಕಲಿಯುವಂತಾಗಿದೆ. ಇನ್ನಾದ್ರೂ  ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ವ್ಯಥೆ ಕಾಡಲಿದ್ದು, ದಾಂಪತ್ಯದಲ್ಲಿ ಮನಸ್ತಾಪ ಬರಲಿದೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more