ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

Published : Nov 22, 2023, 09:56 AM IST

ಆ ಶಾಲೆಯ ಕಟ್ಟಡ ಕಟ್ಟಿ 4 ದಶಕಗಳಾಗುತ್ತ ಬಂದಿದೆ. ಆದರೆ ಶಾಲೆ ಸಮಸ್ಯೆಗಳ ಆಗರವಾಗಿದ್ದು, ಸಾಯಂಕಾಲವಾದರೆ ಪುಂಡ ಪೋಕರಿಗಳ ಅಡ್ಡೆಯಾಗುತ್ತೆ. ಏನದು ಅನ್ನೋದರ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ..
 

ಇದು ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಮತ್ತಿಕೆರೆ ಬಿಬಿಎಂಪಿ ಸರ್ಕಾರಿ ಬಾಲಕಿರ ಪ್ರೌಢ ಶಾಲೆ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪರಿಸ್ಥಿತಿ. ಶಾಲಾ(School) ಕಟ್ಟಡ ಕಟ್ಟಿ 40 ವರ್ಷಗಳೇ ಕಳೆದಿದ್ದು.. 500ಕ್ಕೂ ಅಧಿಕ ವಿದ್ಯಾರ್ಥಿನಿಯರು(Students) ವ್ಯಾಸಂಗ ಮಾಡುತ್ತಿದ್ದಾರೆ. ಆದ್ರೆ ಶಾಲೆಯ ಗೇಟ್ ಬಿದ್ದು ಹೋಗಿ ವರ್ಷಗಳೇ ಕಳೆದಿವೆ. ಶಾಲಾ ಕೊಠಡಿಯ ಮೇಲ್ಛಾವಣಿಯ ಸೀಲಿಂಗ್ ಕಿತ್ತು ಹೋಗಿದ್ದು, ಕೆಳಗೆ ಕುಳಿತು ಮಕ್ಕಳು ಪಾಠ ಕೇಳುವಂತಾಗದೆ. ಶಾಲೆಯ ಗೇಟ್ ಇಲ್ಲದ ಪರಿಣಾಮ ಸಾಯಂಕಾಲ ಆದರೆ ಸಾಕು ಪುಂಡ - ಪೋಕರಿಗಳು ಇಲ್ಲಿಗೆ ಬಂದು ಮಧ್ಯಪಾನ(Drink), ಧೂಮಪಾನ ಮಾಡುತ್ತಾರೆ. ಅಷ್ಟೇ ಅಲ್ಲದೇ ಶಾಲಾ ಸಮಯದಲ್ಲೂ ಅದೆಷ್ಟೋ ಬಾರಿ ಗಲಾಟೆ ಕೂಡ ಮಾಡಿದ್ದಾರಂತೆ. ಇನ್ನೊಂದೆಡೆ ಹೈಸ್ಕೂಲ್ ಜೊತೆಗೆ ಕಾಲೇಜು ಕೂಡ ಇರುವ ಕಾರಣ ಇದೇ ಶಾಲಾ ಕಟ್ಟಡ ಮೇಲೆ ಕಾಲೇಜು ಕಟ್ಟಡ ಕಟ್ಟಲು ಬಿವಿಎಂಪಿ ಮುಂದಾಗಿದೆಯಂತೆ. ಈಗಿರುವ ಕಟ್ಟಡ ಮಳೆಗಾಲದಲ್ಲಿ ಸೋರಿಕೆ ಆಗುತ್ತದೆ. ಸಿಲಿಂಗ್ ಕೂಡ ಕಿತ್ತುಕೊಂಡು ಬರುತ್ತಿದೆ. ಹೀಗಾಗಿ ಕಟ್ಟಡ ಬಗ್ಗೆ ಸರಿಯಾದ ಪರಿಶೀಲನೆ ಮಾಡಿ ಕಟ್ಟಡ ಕಟ್ಟಬೇಕು. ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಕೂಡ ಮಾಡಲಾಗಿದೆ . ಆದ್ರು ಕೂಡ ಯಾರೊಬ್ಬರು ಇತ್ತ ಗಮನ ಹರಿಸುತ್ತಿಲ್ಲ. ಈ ಶಾಲಾ ಮಕ್ಕಳಿಗೆ ಸುರಕ್ಷತೆ ಇಲ್ಲ.. ಮೇಲ್ಛಾವಣಿ ಭಾಗ ಕುಸಿದು ಬೀಳುತ್ತಿರುವುದರಿಂದ ಜೀವ ಭಯದಲ್ಲೆ ಪಾಠ ಕಲಿಯುವಂತಾಗಿದೆ. ಇನ್ನಾದ್ರೂ  ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ವ್ಯಥೆ ಕಾಡಲಿದ್ದು, ದಾಂಪತ್ಯದಲ್ಲಿ ಮನಸ್ತಾಪ ಬರಲಿದೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more