ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

Published : Oct 09, 2023, 11:33 AM IST

ಆತ ಪಿಯುಸಿ ಓದಿದ್ದ 26 ವರ್ಷದ ನವಯುವಕ. ವಯಸ್ಸಾದ ತಂದೆ- ತಾಯಿಗೆ ಆಸರೆ ಆಗಬೇಕಾದ ಮಗ. ಆದ್ರೆ ಈಗ ಮಗನನ್ನೇ ಕಂಡರೆ ಪೋಷಕರು ಭಯಬಿದ್ದು ಆತನ ಕೈ- ಕಾಲುಗಳಿಗೆ ಬೇಡಿ ಹಾಕಿದ್ದಾರೆ.

ಕಣ್ಣೀರು ಹಾಕುತ್ತಾ ಭಯದಿಂದಲೇ ಯುವಕನಿಗೆ ಅನ್ನ ನೀಡುತ್ತಿರುವ ಮಹಿಳೆ ಹೆಸರು ನೀಲಮ್ಮ. ಮತ್ತೊಂದು ಕಡೆ ಕೈ- ಕಾಲಿಗೆ ಬೇಡಿ ಹಾಕಿಕೊಂಡು ನರಳುತ್ತಿರುವ ಯುವಕ. ಈ ದೃಶ್ಯಗಳು ಕಂಡು ಬಂದಿದ್ದು ರಾಯಚೂರು(Raichur) ಜಿಲ್ಲೆ ಲಿಂಗಸೂಗೂರು ತಾಲೂಕಿನ ದೇವರಭೂಪರ ಗ್ರಾಮದಲ್ಲಿ. ದೇವರಭೂಪುರ ಗ್ರಾಮದ ನೀಲಮ್ಮ ಹಾಗೂ ರಂಗಪ್ಪ ದಂಪತಿಗೆ ಇಬ್ಬರು ಮಕ್ಕಳು. ಈ ಪೈಕಿ ಮೊದಲನೇ ಮಗ 28 ವರ್ಷದ ಈ ಹನುಮಂತ. ಈತ ಮಾನಸಿಕ ಅಸ್ವಸ್ಥನಂತೆ(Mentally ill). ಹೀಗಾಗಿ ಕಳೆದ 6 ವರ್ಷಗಳಿಂದ ಹೆತ್ತವರೇ ಗೃಹ ಬಂಧನದಲ್ಲಿಟ್ಟಿದ್ದಾರೆ. ಹನುಮಂತನ ಕೈ-ಕಾಲುಗಳಿಗೆ ಕೋಳ ಹಾಕಲಾಗಿದೆ. ಈತನನ್ನ ಮನೆಯ ಒಂದು ಕೋಣೆಯಲ್ಲಿರಿಸಿದ್ರೆ, ತಾಯಿ ನೀಲಮ್ಮ, ತಂದೆ ರಂಗಪ್ಪ ಹಾಗೂ ತಮ್ಮ ವೆಂಕಟೇಶ್ ಮತ್ತೊಂದು ಕೋಣೆಯಲ್ಲಿರ್ತಾರೆ. ಕಳೆದ ಕೆಲ ವರ್ಷಗಳ ಹಿಂದೆ ಹನುಮಂತ ಮರದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನಂತೆ. ಇದಾದ ಬಳಿಕ ಮಾನಸಿಕವಾಗಿ ನೊಂದು ಹೋಗಿದ್ದ ಈತ, ಸಿಕ್ಕ ಸಿಕ್ಕವರ ಮೇಲೆ ಎರಗುತ್ತಿದ್ದನಂತೆ. ಅದೇ ಕಾರಣಕ್ಕೆ ಕೈಗೆ ಕೋಳ ತೊಡಿಸಿದ ಪೋಷಕರು, ಕಳೆದ 6 ವರ್ಷಗಳಿಂದಲೂ ಹೀಗೆ ಗೃಹಬಂಧನದಲ್ಲಿ(House Arrest) ಇಟ್ಟಿದ್ದಾರೆ. ಹಾಗಂತ ಹನುಮಂತನಿಗೆ ವಿವಿಧ ಆಸ್ಪತ್ರೆಗಳಿಗೆ ತೋರಿಸಿ ಚಿಕಿತ್ಸೆ ಕೂಡ ಕೊಡಿಸಿದ್ದಾರಂತೆ. ಆದ್ರೆ ದುರದೃಷ್ಟವಶಾತ್ ಆತ ಮಾತ್ರ ಚೇತರಿಕೆಯಾಗಿಲ್ಲ. ಹನುಮಂತ ಕೆಲವೊಮ್ಮೆ ಕಲ್ಲು, ಗಾಜು, ಕಟ್ಟಿಗೆಗಳನ್ನ ತಿನ್ನುತ್ತಾನಂತೆ.  ಹೀಗಾಗಿ ಈತನನ್ನು ಕಟ್ಟಿಹಾಕಿದ್ದಾರೆ. ಇಳಿವಯಸ್ಸಲ್ಲಿ ತಂದೆ-ತಾಯಿ ಸಲುಹಬೇಕಿದ್ದ ಮಗ ಗೃಹ ಬಂಧನದಲ್ಲಿ ನರಳುತ್ತಿರೋದು ದುರಂತ.‌

ಇದನ್ನೂ ವೀಕ್ಷಿಸಿ:  ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more