ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

Published : Oct 09, 2023, 11:33 AM IST

ಆತ ಪಿಯುಸಿ ಓದಿದ್ದ 26 ವರ್ಷದ ನವಯುವಕ. ವಯಸ್ಸಾದ ತಂದೆ- ತಾಯಿಗೆ ಆಸರೆ ಆಗಬೇಕಾದ ಮಗ. ಆದ್ರೆ ಈಗ ಮಗನನ್ನೇ ಕಂಡರೆ ಪೋಷಕರು ಭಯಬಿದ್ದು ಆತನ ಕೈ- ಕಾಲುಗಳಿಗೆ ಬೇಡಿ ಹಾಕಿದ್ದಾರೆ.

ಕಣ್ಣೀರು ಹಾಕುತ್ತಾ ಭಯದಿಂದಲೇ ಯುವಕನಿಗೆ ಅನ್ನ ನೀಡುತ್ತಿರುವ ಮಹಿಳೆ ಹೆಸರು ನೀಲಮ್ಮ. ಮತ್ತೊಂದು ಕಡೆ ಕೈ- ಕಾಲಿಗೆ ಬೇಡಿ ಹಾಕಿಕೊಂಡು ನರಳುತ್ತಿರುವ ಯುವಕ. ಈ ದೃಶ್ಯಗಳು ಕಂಡು ಬಂದಿದ್ದು ರಾಯಚೂರು(Raichur) ಜಿಲ್ಲೆ ಲಿಂಗಸೂಗೂರು ತಾಲೂಕಿನ ದೇವರಭೂಪರ ಗ್ರಾಮದಲ್ಲಿ. ದೇವರಭೂಪುರ ಗ್ರಾಮದ ನೀಲಮ್ಮ ಹಾಗೂ ರಂಗಪ್ಪ ದಂಪತಿಗೆ ಇಬ್ಬರು ಮಕ್ಕಳು. ಈ ಪೈಕಿ ಮೊದಲನೇ ಮಗ 28 ವರ್ಷದ ಈ ಹನುಮಂತ. ಈತ ಮಾನಸಿಕ ಅಸ್ವಸ್ಥನಂತೆ(Mentally ill). ಹೀಗಾಗಿ ಕಳೆದ 6 ವರ್ಷಗಳಿಂದ ಹೆತ್ತವರೇ ಗೃಹ ಬಂಧನದಲ್ಲಿಟ್ಟಿದ್ದಾರೆ. ಹನುಮಂತನ ಕೈ-ಕಾಲುಗಳಿಗೆ ಕೋಳ ಹಾಕಲಾಗಿದೆ. ಈತನನ್ನ ಮನೆಯ ಒಂದು ಕೋಣೆಯಲ್ಲಿರಿಸಿದ್ರೆ, ತಾಯಿ ನೀಲಮ್ಮ, ತಂದೆ ರಂಗಪ್ಪ ಹಾಗೂ ತಮ್ಮ ವೆಂಕಟೇಶ್ ಮತ್ತೊಂದು ಕೋಣೆಯಲ್ಲಿರ್ತಾರೆ. ಕಳೆದ ಕೆಲ ವರ್ಷಗಳ ಹಿಂದೆ ಹನುಮಂತ ಮರದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನಂತೆ. ಇದಾದ ಬಳಿಕ ಮಾನಸಿಕವಾಗಿ ನೊಂದು ಹೋಗಿದ್ದ ಈತ, ಸಿಕ್ಕ ಸಿಕ್ಕವರ ಮೇಲೆ ಎರಗುತ್ತಿದ್ದನಂತೆ. ಅದೇ ಕಾರಣಕ್ಕೆ ಕೈಗೆ ಕೋಳ ತೊಡಿಸಿದ ಪೋಷಕರು, ಕಳೆದ 6 ವರ್ಷಗಳಿಂದಲೂ ಹೀಗೆ ಗೃಹಬಂಧನದಲ್ಲಿ(House Arrest) ಇಟ್ಟಿದ್ದಾರೆ. ಹಾಗಂತ ಹನುಮಂತನಿಗೆ ವಿವಿಧ ಆಸ್ಪತ್ರೆಗಳಿಗೆ ತೋರಿಸಿ ಚಿಕಿತ್ಸೆ ಕೂಡ ಕೊಡಿಸಿದ್ದಾರಂತೆ. ಆದ್ರೆ ದುರದೃಷ್ಟವಶಾತ್ ಆತ ಮಾತ್ರ ಚೇತರಿಕೆಯಾಗಿಲ್ಲ. ಹನುಮಂತ ಕೆಲವೊಮ್ಮೆ ಕಲ್ಲು, ಗಾಜು, ಕಟ್ಟಿಗೆಗಳನ್ನ ತಿನ್ನುತ್ತಾನಂತೆ.  ಹೀಗಾಗಿ ಈತನನ್ನು ಕಟ್ಟಿಹಾಕಿದ್ದಾರೆ. ಇಳಿವಯಸ್ಸಲ್ಲಿ ತಂದೆ-ತಾಯಿ ಸಲುಹಬೇಕಿದ್ದ ಮಗ ಗೃಹ ಬಂಧನದಲ್ಲಿ ನರಳುತ್ತಿರೋದು ದುರಂತ.‌

ಇದನ್ನೂ ವೀಕ್ಷಿಸಿ:  ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more