ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

Published : Oct 09, 2023, 11:33 AM IST

ಆತ ಪಿಯುಸಿ ಓದಿದ್ದ 26 ವರ್ಷದ ನವಯುವಕ. ವಯಸ್ಸಾದ ತಂದೆ- ತಾಯಿಗೆ ಆಸರೆ ಆಗಬೇಕಾದ ಮಗ. ಆದ್ರೆ ಈಗ ಮಗನನ್ನೇ ಕಂಡರೆ ಪೋಷಕರು ಭಯಬಿದ್ದು ಆತನ ಕೈ- ಕಾಲುಗಳಿಗೆ ಬೇಡಿ ಹಾಕಿದ್ದಾರೆ.

ಕಣ್ಣೀರು ಹಾಕುತ್ತಾ ಭಯದಿಂದಲೇ ಯುವಕನಿಗೆ ಅನ್ನ ನೀಡುತ್ತಿರುವ ಮಹಿಳೆ ಹೆಸರು ನೀಲಮ್ಮ. ಮತ್ತೊಂದು ಕಡೆ ಕೈ- ಕಾಲಿಗೆ ಬೇಡಿ ಹಾಕಿಕೊಂಡು ನರಳುತ್ತಿರುವ ಯುವಕ. ಈ ದೃಶ್ಯಗಳು ಕಂಡು ಬಂದಿದ್ದು ರಾಯಚೂರು(Raichur) ಜಿಲ್ಲೆ ಲಿಂಗಸೂಗೂರು ತಾಲೂಕಿನ ದೇವರಭೂಪರ ಗ್ರಾಮದಲ್ಲಿ. ದೇವರಭೂಪುರ ಗ್ರಾಮದ ನೀಲಮ್ಮ ಹಾಗೂ ರಂಗಪ್ಪ ದಂಪತಿಗೆ ಇಬ್ಬರು ಮಕ್ಕಳು. ಈ ಪೈಕಿ ಮೊದಲನೇ ಮಗ 28 ವರ್ಷದ ಈ ಹನುಮಂತ. ಈತ ಮಾನಸಿಕ ಅಸ್ವಸ್ಥನಂತೆ(Mentally ill). ಹೀಗಾಗಿ ಕಳೆದ 6 ವರ್ಷಗಳಿಂದ ಹೆತ್ತವರೇ ಗೃಹ ಬಂಧನದಲ್ಲಿಟ್ಟಿದ್ದಾರೆ. ಹನುಮಂತನ ಕೈ-ಕಾಲುಗಳಿಗೆ ಕೋಳ ಹಾಕಲಾಗಿದೆ. ಈತನನ್ನ ಮನೆಯ ಒಂದು ಕೋಣೆಯಲ್ಲಿರಿಸಿದ್ರೆ, ತಾಯಿ ನೀಲಮ್ಮ, ತಂದೆ ರಂಗಪ್ಪ ಹಾಗೂ ತಮ್ಮ ವೆಂಕಟೇಶ್ ಮತ್ತೊಂದು ಕೋಣೆಯಲ್ಲಿರ್ತಾರೆ. ಕಳೆದ ಕೆಲ ವರ್ಷಗಳ ಹಿಂದೆ ಹನುಮಂತ ಮರದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನಂತೆ. ಇದಾದ ಬಳಿಕ ಮಾನಸಿಕವಾಗಿ ನೊಂದು ಹೋಗಿದ್ದ ಈತ, ಸಿಕ್ಕ ಸಿಕ್ಕವರ ಮೇಲೆ ಎರಗುತ್ತಿದ್ದನಂತೆ. ಅದೇ ಕಾರಣಕ್ಕೆ ಕೈಗೆ ಕೋಳ ತೊಡಿಸಿದ ಪೋಷಕರು, ಕಳೆದ 6 ವರ್ಷಗಳಿಂದಲೂ ಹೀಗೆ ಗೃಹಬಂಧನದಲ್ಲಿ(House Arrest) ಇಟ್ಟಿದ್ದಾರೆ. ಹಾಗಂತ ಹನುಮಂತನಿಗೆ ವಿವಿಧ ಆಸ್ಪತ್ರೆಗಳಿಗೆ ತೋರಿಸಿ ಚಿಕಿತ್ಸೆ ಕೂಡ ಕೊಡಿಸಿದ್ದಾರಂತೆ. ಆದ್ರೆ ದುರದೃಷ್ಟವಶಾತ್ ಆತ ಮಾತ್ರ ಚೇತರಿಕೆಯಾಗಿಲ್ಲ. ಹನುಮಂತ ಕೆಲವೊಮ್ಮೆ ಕಲ್ಲು, ಗಾಜು, ಕಟ್ಟಿಗೆಗಳನ್ನ ತಿನ್ನುತ್ತಾನಂತೆ.  ಹೀಗಾಗಿ ಈತನನ್ನು ಕಟ್ಟಿಹಾಕಿದ್ದಾರೆ. ಇಳಿವಯಸ್ಸಲ್ಲಿ ತಂದೆ-ತಾಯಿ ಸಲುಹಬೇಕಿದ್ದ ಮಗ ಗೃಹ ಬಂಧನದಲ್ಲಿ ನರಳುತ್ತಿರೋದು ದುರಂತ.‌

ಇದನ್ನೂ ವೀಕ್ಷಿಸಿ:  ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more