ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

Published : Oct 09, 2023, 11:33 AM IST

ಆತ ಪಿಯುಸಿ ಓದಿದ್ದ 26 ವರ್ಷದ ನವಯುವಕ. ವಯಸ್ಸಾದ ತಂದೆ- ತಾಯಿಗೆ ಆಸರೆ ಆಗಬೇಕಾದ ಮಗ. ಆದ್ರೆ ಈಗ ಮಗನನ್ನೇ ಕಂಡರೆ ಪೋಷಕರು ಭಯಬಿದ್ದು ಆತನ ಕೈ- ಕಾಲುಗಳಿಗೆ ಬೇಡಿ ಹಾಕಿದ್ದಾರೆ.

ಕಣ್ಣೀರು ಹಾಕುತ್ತಾ ಭಯದಿಂದಲೇ ಯುವಕನಿಗೆ ಅನ್ನ ನೀಡುತ್ತಿರುವ ಮಹಿಳೆ ಹೆಸರು ನೀಲಮ್ಮ. ಮತ್ತೊಂದು ಕಡೆ ಕೈ- ಕಾಲಿಗೆ ಬೇಡಿ ಹಾಕಿಕೊಂಡು ನರಳುತ್ತಿರುವ ಯುವಕ. ಈ ದೃಶ್ಯಗಳು ಕಂಡು ಬಂದಿದ್ದು ರಾಯಚೂರು(Raichur) ಜಿಲ್ಲೆ ಲಿಂಗಸೂಗೂರು ತಾಲೂಕಿನ ದೇವರಭೂಪರ ಗ್ರಾಮದಲ್ಲಿ. ದೇವರಭೂಪುರ ಗ್ರಾಮದ ನೀಲಮ್ಮ ಹಾಗೂ ರಂಗಪ್ಪ ದಂಪತಿಗೆ ಇಬ್ಬರು ಮಕ್ಕಳು. ಈ ಪೈಕಿ ಮೊದಲನೇ ಮಗ 28 ವರ್ಷದ ಈ ಹನುಮಂತ. ಈತ ಮಾನಸಿಕ ಅಸ್ವಸ್ಥನಂತೆ(Mentally ill). ಹೀಗಾಗಿ ಕಳೆದ 6 ವರ್ಷಗಳಿಂದ ಹೆತ್ತವರೇ ಗೃಹ ಬಂಧನದಲ್ಲಿಟ್ಟಿದ್ದಾರೆ. ಹನುಮಂತನ ಕೈ-ಕಾಲುಗಳಿಗೆ ಕೋಳ ಹಾಕಲಾಗಿದೆ. ಈತನನ್ನ ಮನೆಯ ಒಂದು ಕೋಣೆಯಲ್ಲಿರಿಸಿದ್ರೆ, ತಾಯಿ ನೀಲಮ್ಮ, ತಂದೆ ರಂಗಪ್ಪ ಹಾಗೂ ತಮ್ಮ ವೆಂಕಟೇಶ್ ಮತ್ತೊಂದು ಕೋಣೆಯಲ್ಲಿರ್ತಾರೆ. ಕಳೆದ ಕೆಲ ವರ್ಷಗಳ ಹಿಂದೆ ಹನುಮಂತ ಮರದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನಂತೆ. ಇದಾದ ಬಳಿಕ ಮಾನಸಿಕವಾಗಿ ನೊಂದು ಹೋಗಿದ್ದ ಈತ, ಸಿಕ್ಕ ಸಿಕ್ಕವರ ಮೇಲೆ ಎರಗುತ್ತಿದ್ದನಂತೆ. ಅದೇ ಕಾರಣಕ್ಕೆ ಕೈಗೆ ಕೋಳ ತೊಡಿಸಿದ ಪೋಷಕರು, ಕಳೆದ 6 ವರ್ಷಗಳಿಂದಲೂ ಹೀಗೆ ಗೃಹಬಂಧನದಲ್ಲಿ(House Arrest) ಇಟ್ಟಿದ್ದಾರೆ. ಹಾಗಂತ ಹನುಮಂತನಿಗೆ ವಿವಿಧ ಆಸ್ಪತ್ರೆಗಳಿಗೆ ತೋರಿಸಿ ಚಿಕಿತ್ಸೆ ಕೂಡ ಕೊಡಿಸಿದ್ದಾರಂತೆ. ಆದ್ರೆ ದುರದೃಷ್ಟವಶಾತ್ ಆತ ಮಾತ್ರ ಚೇತರಿಕೆಯಾಗಿಲ್ಲ. ಹನುಮಂತ ಕೆಲವೊಮ್ಮೆ ಕಲ್ಲು, ಗಾಜು, ಕಟ್ಟಿಗೆಗಳನ್ನ ತಿನ್ನುತ್ತಾನಂತೆ.  ಹೀಗಾಗಿ ಈತನನ್ನು ಕಟ್ಟಿಹಾಕಿದ್ದಾರೆ. ಇಳಿವಯಸ್ಸಲ್ಲಿ ತಂದೆ-ತಾಯಿ ಸಲುಹಬೇಕಿದ್ದ ಮಗ ಗೃಹ ಬಂಧನದಲ್ಲಿ ನರಳುತ್ತಿರೋದು ದುರಂತ.‌

ಇದನ್ನೂ ವೀಕ್ಷಿಸಿ:  ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more