ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

ಹೆತ್ತವರಿಂದಲೇ ಯುವಕನಿಗೆ ಗೃಹ ಬಂಧನ ಶಿಕ್ಷೆ! ಮಾನಸಿಕ ಅಸ್ವಸ್ಥ ಪಟ್ಟಕಟ್ಟಿ 6 ವರ್ಷ ಕೈಗೆ ಕೋಳ ..!

Published : Oct 09, 2023, 11:33 AM IST

ಆತ ಪಿಯುಸಿ ಓದಿದ್ದ 26 ವರ್ಷದ ನವಯುವಕ. ವಯಸ್ಸಾದ ತಂದೆ- ತಾಯಿಗೆ ಆಸರೆ ಆಗಬೇಕಾದ ಮಗ. ಆದ್ರೆ ಈಗ ಮಗನನ್ನೇ ಕಂಡರೆ ಪೋಷಕರು ಭಯಬಿದ್ದು ಆತನ ಕೈ- ಕಾಲುಗಳಿಗೆ ಬೇಡಿ ಹಾಕಿದ್ದಾರೆ.

ಕಣ್ಣೀರು ಹಾಕುತ್ತಾ ಭಯದಿಂದಲೇ ಯುವಕನಿಗೆ ಅನ್ನ ನೀಡುತ್ತಿರುವ ಮಹಿಳೆ ಹೆಸರು ನೀಲಮ್ಮ. ಮತ್ತೊಂದು ಕಡೆ ಕೈ- ಕಾಲಿಗೆ ಬೇಡಿ ಹಾಕಿಕೊಂಡು ನರಳುತ್ತಿರುವ ಯುವಕ. ಈ ದೃಶ್ಯಗಳು ಕಂಡು ಬಂದಿದ್ದು ರಾಯಚೂರು(Raichur) ಜಿಲ್ಲೆ ಲಿಂಗಸೂಗೂರು ತಾಲೂಕಿನ ದೇವರಭೂಪರ ಗ್ರಾಮದಲ್ಲಿ. ದೇವರಭೂಪುರ ಗ್ರಾಮದ ನೀಲಮ್ಮ ಹಾಗೂ ರಂಗಪ್ಪ ದಂಪತಿಗೆ ಇಬ್ಬರು ಮಕ್ಕಳು. ಈ ಪೈಕಿ ಮೊದಲನೇ ಮಗ 28 ವರ್ಷದ ಈ ಹನುಮಂತ. ಈತ ಮಾನಸಿಕ ಅಸ್ವಸ್ಥನಂತೆ(Mentally ill). ಹೀಗಾಗಿ ಕಳೆದ 6 ವರ್ಷಗಳಿಂದ ಹೆತ್ತವರೇ ಗೃಹ ಬಂಧನದಲ್ಲಿಟ್ಟಿದ್ದಾರೆ. ಹನುಮಂತನ ಕೈ-ಕಾಲುಗಳಿಗೆ ಕೋಳ ಹಾಕಲಾಗಿದೆ. ಈತನನ್ನ ಮನೆಯ ಒಂದು ಕೋಣೆಯಲ್ಲಿರಿಸಿದ್ರೆ, ತಾಯಿ ನೀಲಮ್ಮ, ತಂದೆ ರಂಗಪ್ಪ ಹಾಗೂ ತಮ್ಮ ವೆಂಕಟೇಶ್ ಮತ್ತೊಂದು ಕೋಣೆಯಲ್ಲಿರ್ತಾರೆ. ಕಳೆದ ಕೆಲ ವರ್ಷಗಳ ಹಿಂದೆ ಹನುಮಂತ ಮರದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನಂತೆ. ಇದಾದ ಬಳಿಕ ಮಾನಸಿಕವಾಗಿ ನೊಂದು ಹೋಗಿದ್ದ ಈತ, ಸಿಕ್ಕ ಸಿಕ್ಕವರ ಮೇಲೆ ಎರಗುತ್ತಿದ್ದನಂತೆ. ಅದೇ ಕಾರಣಕ್ಕೆ ಕೈಗೆ ಕೋಳ ತೊಡಿಸಿದ ಪೋಷಕರು, ಕಳೆದ 6 ವರ್ಷಗಳಿಂದಲೂ ಹೀಗೆ ಗೃಹಬಂಧನದಲ್ಲಿ(House Arrest) ಇಟ್ಟಿದ್ದಾರೆ. ಹಾಗಂತ ಹನುಮಂತನಿಗೆ ವಿವಿಧ ಆಸ್ಪತ್ರೆಗಳಿಗೆ ತೋರಿಸಿ ಚಿಕಿತ್ಸೆ ಕೂಡ ಕೊಡಿಸಿದ್ದಾರಂತೆ. ಆದ್ರೆ ದುರದೃಷ್ಟವಶಾತ್ ಆತ ಮಾತ್ರ ಚೇತರಿಕೆಯಾಗಿಲ್ಲ. ಹನುಮಂತ ಕೆಲವೊಮ್ಮೆ ಕಲ್ಲು, ಗಾಜು, ಕಟ್ಟಿಗೆಗಳನ್ನ ತಿನ್ನುತ್ತಾನಂತೆ.  ಹೀಗಾಗಿ ಈತನನ್ನು ಕಟ್ಟಿಹಾಕಿದ್ದಾರೆ. ಇಳಿವಯಸ್ಸಲ್ಲಿ ತಂದೆ-ತಾಯಿ ಸಲುಹಬೇಕಿದ್ದ ಮಗ ಗೃಹ ಬಂಧನದಲ್ಲಿ ನರಳುತ್ತಿರೋದು ದುರಂತ.‌

ಇದನ್ನೂ ವೀಕ್ಷಿಸಿ:  ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more