Jan 17, 2020, 6:20 PM IST
ಬೆಳಗಾವಿ (ಜ.17): ಬೆಳಗಾವಿಯಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಎಂಇಎಸ್ ಹುತಾತ್ಮರ ದಿನಾಚರಣೆ ಆಚರಿಸಿತು. ಬೆಳಗಾವಿ ನಗರದ ಹುತಾತ್ಮ ಚೌಕ್ ನಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರಿಂದ, ಭಾಷಾ ಗಲಾಟೆಯಲ್ಲಿ ಮೃತಪಟ್ಟ ಎಂಇಎಸ್ ಕಾರ್ಯಕರ್ತರ ನೆನಪಿಗಾಗಿ ಹುತಾತ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ | ಬೆಳಗಾವಿಗೆ ಎಂಟ್ರಿ ಕೊಟ್ಟ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಬಂಧನ...
ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದು, ಬೆಳಗಾವಿಯ ನಾಲ್ಕೂ ದಿಕ್ಕಿನಲ್ಲಿ ಪೊಲೀಸ್ ಸರ್ಪಗಾವಲು ಇತ್ತು. ಎಂಇಎಸ್ ಮತ್ತೆ ಶಾಂತಿ ಕದಡುವ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಏರಪಡಿಸಲಾಗಿತ್ತು.