ಕರ್ನಾಟಕದ ಹಾಲು ಮಹಾರಾಷ್ಟ್ರದ ಪಾಲು: ಸೈಲೆಂಟಾಗಿ ಕರುನಾಡ ಗಡಿಗೆ ‘ಮಹಾ’ ಡೈರಿಗಳ ಎಂಟ್ರಿ !

ಕರ್ನಾಟಕದ ಹಾಲು ಮಹಾರಾಷ್ಟ್ರದ ಪಾಲು: ಸೈಲೆಂಟಾಗಿ ಕರುನಾಡ ಗಡಿಗೆ ‘ಮಹಾ’ ಡೈರಿಗಳ ಎಂಟ್ರಿ !

Published : Sep 12, 2023, 10:03 AM IST

ನಂದಿನಿ ಇದು ಕರ್ನಾಟಕದ ಅಸ್ಮಿತೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಆದ್ರೀಗ ಕರ್ನಾಟಕ ಗಡಿಯಲ್ಲಿ ನಡೆಯುತ್ತಿರೋ ಅದೊಂದು ಬೆಳವಣಿಗೆಯಿಂದ ನಂದಿನಿ ಪಾಲಿಗೆ ಕಂಟಕ ಎದುರಾಗುವ ಲಕ್ಷಣಗಳು ಕಾಣ್ತಿವೆ. ಸದ್ದೇ ಇಲ್ಲದೆ ವಿಜಯಪುರದ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಹಾಲಿನ ಡೇರಿಗಳು ಎಂಟ್ರಿಯಾಗಿವೆ. ರೈತರಿಗೆ ಹೆಚ್ಚಿನ ದರದ ಆಮೀಷ ತೋರಿಸಿ ಹಾಲು ಖರೀದಿಸಿ ಮಹಾರಾಷ್ಟ್ರಕ್ಕೆ ಕೊಂಡೊಯ್ತಿವೆ.

ನಂದಿನಿ ಕನ್ನಡಿಗರ ಲೋಕಲ್ ಬ್ರ್ಯಾಂಡ್.. ನಂದಿನಿ(Nandini milk) ಉಳಿವಿಗಾಗಿ ನಡೆಯುತ್ತಿರುವ ಹೋರಾಟ ಎಲ್ಲರಿಗೂ ಗೊತ್ತು. ಆದ್ರೆ ಗಡಿ ಜಿಲ್ಲೆ ವಿಜಯಪುರದಲ್ಲಿ(Vijayapura) ನಂದಿನಿಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣ್ತಿವೆ. ಯಾಕಂದ್ರೆ ವಿಜಯಪುರ ಜಿಲ್ಲೆಯ ಮಹಾರಾಷ್ಟ್ರ(Maharashtra) ಗಡಿಯಲ್ಲಿರುವ ಹಳ್ಳಿಗಳಿಗೆ ಮಹಾರಾಷ್ಟ್ರದ ಹಾಲಿನ ಡೈರಿಗಳು(milk dairies) ಎಂಟ್ರಿ ಕೊಟ್ಟಿವೆ. ಮಹಾರಾಷ್ಟ್ರದಿಂದ ಬಂದಿರೋ ಹಾಲಿನ ಡೈರಿಗಳು ನಮ್ಮ ರಾಜ್ಯದ ರೈತರು ಉತ್ಪಾದಿಸಿದ ಗುಣಮಟ್ಟದ ಹಾಲನ್ನ ಖರೀದಿಸಿ ಮಹಾರಾಷ್ಟ್ರಕ್ಕೆ ಕೊಂಡೊಯ್ತಿವೆ. ತಿಕೋಟ ತಾಲೂಕಿನ ಬಾಬಾನಗರ, ಕನಮಡಿ, ಅಳಗಿನಾಳ, ಸೇರಿದಂತೆ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಹಾಲಿನ ಡೈರಿಗಳು ಪ್ರಬಲವಾಗಿ ಬೆಳೆದು ನಿಂತಿವೆ. ಲೀಟರ್‌ ಹಾಲಿಗೆ ರೈತರಿಂದ 35 ರಿಂದ 40ರೂಪಾಯಿಗೆ ಖರೀದಿ ಮಾಡ್ತಿವೆ. ಫ್ಯಾಟ್‌ ಹೆಚ್ಚಿಗೆ ಇದ್ದಲ್ಲಿ ಲೀಟರ್ಗೆ 60 ರೂಪಾಯಿವರೆಗೂ ಹಣ ನೀಡ್ತಿವೆ. ಕೆಎಂಎಫ್ ರೈತರಿಗೆ ಲೀಟರ್ ಹಾಲಿಗೆ ಕೇವಲ 33 ರೂಪಾಯಿ ನೀಡ್ತಿದೆ. ಅದು 15 ದಿನಕ್ಕೊಮ್ಮೆ ರೈತರ ಅಕೌಂಟ್ಗೆ ಜಮೆ ಆಗುತ್ತೆ. ಆದ್ರೆ ಮಹಾರಾಷ್ಟ್ರ ಡೈರಿಗಳು ಆಯಾ ದಿನವೇ ರೈತರಿಗೆ ಹಣ ನೀಡ್ತಿವೆ. ಪ್ರೋತ್ಸಾಹ ಧನವಾಗಿ ನೀಡ್ತಿರೋ 5 ರೂ. 6 ತಿಂಗಳಿಗೊಮ್ಮೆ ರೈತರಿಗೆ ಜಮೆ ಯಾಗುತ್ತೆ. ಇದನ್ನೇ ಬಂಡವಾಳ ಮಾಡಿಕೊಂಡಿರೋ ಮಹಾರಾಷ್ಟ್ರ ಡೈರಿಗಳು ರಾಜ್ಯದ ಗಡಿ ರೈತರನ್ನ ತಮ್ಮತ್ತ ಸೆಳೆಯುತ್ತಿವೆ. ಮಹಾರಾಷ್ಟ್ರ ಹಾಲಿನ ಡೈರಿಗಳ ಈ ನಡೆ ರಾಜ್ಯದ ಸ್ಥಳೀಯ ಹಾಲು ಒಕ್ಕೂಟಕ್ಕೆ ಆತಂಕ ಮೂಡಿಸಿದೆ.

ಇದನ್ನೂ ವೀಕ್ಷಿಸಿ:  ಕೋಟಿ ಖರ್ಚು ಮಾಡಿದ್ರೂ ವಾಸಕ್ಕೆ ಯೋಗ್ಯವಿಲ್ಲ..! ಕುಡಿಯೋಕೆ ನೀರಿಲ್ಲ..ಡ್ರೈನೇಜ್ ಮೊದಲೇ ಇಲ್ಲ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more