Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Published : Sep 08, 2022, 06:02 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿಯ ಬಗ್ಗೆ ಬಿಗ್‌ 3 ಮಾಡಿದ ವರದಿಗೆ ಶಾಸಕರ ಬೆಂಬಲಿಗರಿಂದ ಸಾಲು ಸಾಲು ಧಮ್ಕಿ ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಕೋಟಿ ಕೋಟಿ ಸುರಿದು ಆಸ್ಪತ್ರೆ ಕಟ್ಟಿದ್ದಾರೆ. ಆದ್ರೆ, ಇಲ್ಲೊಂದು ಶವಗಾರ ಇಲ್ಲದೇ ಇರೋದ್ರಿಂದ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಹೆಣಗಾಡೋ ಪರಿಸ್ಥಿತಿ ಇಲ್ಲಿನ ಆರೋಗ್ಯ ಸಿಬ್ಬಂದಿಗಳದ್ದು. ಮೃತ ದೇಹಗಳನ್ನು 2 ಕಿ.ಮೀಟರ್ ದೂರ ತೆಗೆದುಕೊಂಡು ಹೋಗ್ಬೇಕು. ಜೊತೆಗೆ ವೈದ್ಯಕೀಯ ಸಲಕರಣೆಗಳನ್ನು ತೆಗೆದುಕೊಂಡು ಹೋಗಬೇಕು. ನಂತರವೇ ಇಲ್ಲಿ ಪೋಸ್ಟ್ ಮಾರ್ಟಂ ನಡೆಯೋದು. ಈ ಅಮಾನವೀಯ ಘಟನೆಗೆ ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರ ಮಾಡಿತ್ತು ಇದಕ್ಕೆ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದಾರೆ.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನ್ ನಲ್ಲಿ ಧಮ್ಕಿ ಹಾಕಲಾಗಿದೆ.  ಸುವರ್ಣನ್ಯೂಸ್ , ಶಾಸಕ ಬಸಪ್ಪ ದರ್ಶನಾಪುರ ಪಟಾಲಂ ಅವರನ್ನು ಪ್ರಶ್ನೆ ಮಾಡಿದ್ದು ತಪ್ಪಾ? ಎಂಬ ಪ್ರಶ್ನೆಯನ್ನು ಸುವರ್ಣನ್ಯೂಸ್ ಜನರ ಮುಂದಿಡುತ್ತಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more