Kolar:  5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Kolar: 5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Suvarna News   | Asianet News
Published : Feb 23, 2022, 08:51 AM IST

*  ಬೇರೆಯವರ ಜಮೀನು ಗುತ್ತಿಗೆ ಪಡೆದು ಬೆವರು ಸುರಿಸಿ ಸಂಪಾದನೆ ಮಾಡ್ತಿದ್ದ ಕೃಷಿಕ
*  ದೊಣ್ಣೆ, ಮಚ್ಚು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿ ವಿಕೃತಿ 
*  ಇನ್ನೇನು 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಕಲ್ಲಂಗಡಿ ಹಣ್ಣು ನಾಶ
 

ಕೋಲಾರ(ಫೆ.23):  ಕೋಲಾರ ತಾಲೂಕಿನ ಹೊರಟಿ ಅಗ್ರಹಾರ ಗ್ರಾಮದಲ್ಲಿ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಸಾಲಸೋಲ ಮಾಡಿ ಕಲ್ಲಂಗಡಿ ಹಣ್ಣನ್ನು ಬೆಳೆದಿರುವ ರೈತ ಅಂಬರೀಷ್‌ನ ಬೆಳೆವಣಿಗೆಯನ್ನು ಸಹಿಸಲಾಗದೆ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.  ಹೌದು,  ತಡರಾತ್ರಿ ಕಲ್ಲಂಗಡಿ ಹಣ್ಣಿನ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ದೊಣ್ಣೆ ಹಾಗೂ ಮಚ್ಚನ್ನು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಷ್‌ಗೆ ಕಣ್ಣಾರೆ ಕಂಡು ಒಂದು ಕ್ಷಣ ಶಾಕ್ ಆಗಿದೆ.

ಇನ್ನು 25 ರಿಂದ 30 ಸಾವಿರ ಮೌಲ್ಯದ ಕಲ್ಲಂಗಡಿ ಹಣ್ಣುಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಸಣ್ಣಪುಟ್ಟ ಕಾಯಿಗಳನ್ನು ಬಿಟ್ಟು, ಬೇಕು ಅಂತಾಲೇ 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಹಣ್ಣನ್ನು ನಾಶ ಮಾಡಿದ್ದು, ರೈತ ಅಂಬರೀಷ್ ಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎನ್ನುವಂತಾಗಿದೆ. ರಾತ್ರಿ 9 ಗಂಟವರೆಗೂ ಇಲ್ಲೇ ಕಾವಲು ಕಾದು ಮನೆಗೆ ಹೋಗಿದ್ದ ಅಂಬರೀಷ್ ಬೆಳಿಗ್ಗೆ ಬಂದು ನೋಡೋಷ್ಟರಲ್ಲಿ 700 ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳು ನಾಶವಾಗಿರೋದನ್ನು ಕಂಡು ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಈ ಬಗ್ಗೆ ಕೆಲವರ ಮೇಲೆ ಅನುಮಾನವಿದ್ದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧಾರ ಮಾಡಿದ್ದಾರೆ.

News Hour : ಹರ್ಷ ಹತ್ಯೆ ನಂತರ ಬೆಳಿಗೆ ಬರುತ್ತಿರುವ ಆಘಾತಕಾರಿ ಅಂಶಗಳು!

ಅದೇನೇ ದ್ವೇಷ ಇದ್ರು ಸಹ ಈ ರೀತಿ ಬೆಳೆದ ಬೆಳೆಯನ್ನು ನಾಶ ಮಾಡಿ ವಿಕೃತಿ ಮೆರೆದಿರೋದು ಖಂಡನೀಯ. ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ನೀಡಿ ರೈತನಿಗೆ ಆಗಿರುವ ನಷ್ಟ ಭರಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಲಿ ಅನ್ನೋದು ನಮ್ಮ ಆಶಯ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more