Kolar:  5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Kolar: 5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Suvarna News   | Asianet News
Published : Feb 23, 2022, 08:51 AM IST

*  ಬೇರೆಯವರ ಜಮೀನು ಗುತ್ತಿಗೆ ಪಡೆದು ಬೆವರು ಸುರಿಸಿ ಸಂಪಾದನೆ ಮಾಡ್ತಿದ್ದ ಕೃಷಿಕ
*  ದೊಣ್ಣೆ, ಮಚ್ಚು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿ ವಿಕೃತಿ 
*  ಇನ್ನೇನು 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಕಲ್ಲಂಗಡಿ ಹಣ್ಣು ನಾಶ
 

ಕೋಲಾರ(ಫೆ.23):  ಕೋಲಾರ ತಾಲೂಕಿನ ಹೊರಟಿ ಅಗ್ರಹಾರ ಗ್ರಾಮದಲ್ಲಿ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಸಾಲಸೋಲ ಮಾಡಿ ಕಲ್ಲಂಗಡಿ ಹಣ್ಣನ್ನು ಬೆಳೆದಿರುವ ರೈತ ಅಂಬರೀಷ್‌ನ ಬೆಳೆವಣಿಗೆಯನ್ನು ಸಹಿಸಲಾಗದೆ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.  ಹೌದು,  ತಡರಾತ್ರಿ ಕಲ್ಲಂಗಡಿ ಹಣ್ಣಿನ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ದೊಣ್ಣೆ ಹಾಗೂ ಮಚ್ಚನ್ನು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಷ್‌ಗೆ ಕಣ್ಣಾರೆ ಕಂಡು ಒಂದು ಕ್ಷಣ ಶಾಕ್ ಆಗಿದೆ.

ಇನ್ನು 25 ರಿಂದ 30 ಸಾವಿರ ಮೌಲ್ಯದ ಕಲ್ಲಂಗಡಿ ಹಣ್ಣುಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಸಣ್ಣಪುಟ್ಟ ಕಾಯಿಗಳನ್ನು ಬಿಟ್ಟು, ಬೇಕು ಅಂತಾಲೇ 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಹಣ್ಣನ್ನು ನಾಶ ಮಾಡಿದ್ದು, ರೈತ ಅಂಬರೀಷ್ ಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎನ್ನುವಂತಾಗಿದೆ. ರಾತ್ರಿ 9 ಗಂಟವರೆಗೂ ಇಲ್ಲೇ ಕಾವಲು ಕಾದು ಮನೆಗೆ ಹೋಗಿದ್ದ ಅಂಬರೀಷ್ ಬೆಳಿಗ್ಗೆ ಬಂದು ನೋಡೋಷ್ಟರಲ್ಲಿ 700 ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳು ನಾಶವಾಗಿರೋದನ್ನು ಕಂಡು ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಈ ಬಗ್ಗೆ ಕೆಲವರ ಮೇಲೆ ಅನುಮಾನವಿದ್ದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧಾರ ಮಾಡಿದ್ದಾರೆ.

News Hour : ಹರ್ಷ ಹತ್ಯೆ ನಂತರ ಬೆಳಿಗೆ ಬರುತ್ತಿರುವ ಆಘಾತಕಾರಿ ಅಂಶಗಳು!

ಅದೇನೇ ದ್ವೇಷ ಇದ್ರು ಸಹ ಈ ರೀತಿ ಬೆಳೆದ ಬೆಳೆಯನ್ನು ನಾಶ ಮಾಡಿ ವಿಕೃತಿ ಮೆರೆದಿರೋದು ಖಂಡನೀಯ. ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ನೀಡಿ ರೈತನಿಗೆ ಆಗಿರುವ ನಷ್ಟ ಭರಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಲಿ ಅನ್ನೋದು ನಮ್ಮ ಆಶಯ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more