Kolar:  5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Kolar: 5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Suvarna News   | Asianet News
Published : Feb 23, 2022, 08:51 AM IST

*  ಬೇರೆಯವರ ಜಮೀನು ಗುತ್ತಿಗೆ ಪಡೆದು ಬೆವರು ಸುರಿಸಿ ಸಂಪಾದನೆ ಮಾಡ್ತಿದ್ದ ಕೃಷಿಕ
*  ದೊಣ್ಣೆ, ಮಚ್ಚು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿ ವಿಕೃತಿ 
*  ಇನ್ನೇನು 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಕಲ್ಲಂಗಡಿ ಹಣ್ಣು ನಾಶ
 

ಕೋಲಾರ(ಫೆ.23):  ಕೋಲಾರ ತಾಲೂಕಿನ ಹೊರಟಿ ಅಗ್ರಹಾರ ಗ್ರಾಮದಲ್ಲಿ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಸಾಲಸೋಲ ಮಾಡಿ ಕಲ್ಲಂಗಡಿ ಹಣ್ಣನ್ನು ಬೆಳೆದಿರುವ ರೈತ ಅಂಬರೀಷ್‌ನ ಬೆಳೆವಣಿಗೆಯನ್ನು ಸಹಿಸಲಾಗದೆ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.  ಹೌದು,  ತಡರಾತ್ರಿ ಕಲ್ಲಂಗಡಿ ಹಣ್ಣಿನ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ದೊಣ್ಣೆ ಹಾಗೂ ಮಚ್ಚನ್ನು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಷ್‌ಗೆ ಕಣ್ಣಾರೆ ಕಂಡು ಒಂದು ಕ್ಷಣ ಶಾಕ್ ಆಗಿದೆ.

ಇನ್ನು 25 ರಿಂದ 30 ಸಾವಿರ ಮೌಲ್ಯದ ಕಲ್ಲಂಗಡಿ ಹಣ್ಣುಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಸಣ್ಣಪುಟ್ಟ ಕಾಯಿಗಳನ್ನು ಬಿಟ್ಟು, ಬೇಕು ಅಂತಾಲೇ 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಹಣ್ಣನ್ನು ನಾಶ ಮಾಡಿದ್ದು, ರೈತ ಅಂಬರೀಷ್ ಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎನ್ನುವಂತಾಗಿದೆ. ರಾತ್ರಿ 9 ಗಂಟವರೆಗೂ ಇಲ್ಲೇ ಕಾವಲು ಕಾದು ಮನೆಗೆ ಹೋಗಿದ್ದ ಅಂಬರೀಷ್ ಬೆಳಿಗ್ಗೆ ಬಂದು ನೋಡೋಷ್ಟರಲ್ಲಿ 700 ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳು ನಾಶವಾಗಿರೋದನ್ನು ಕಂಡು ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಈ ಬಗ್ಗೆ ಕೆಲವರ ಮೇಲೆ ಅನುಮಾನವಿದ್ದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧಾರ ಮಾಡಿದ್ದಾರೆ.

News Hour : ಹರ್ಷ ಹತ್ಯೆ ನಂತರ ಬೆಳಿಗೆ ಬರುತ್ತಿರುವ ಆಘಾತಕಾರಿ ಅಂಶಗಳು!

ಅದೇನೇ ದ್ವೇಷ ಇದ್ರು ಸಹ ಈ ರೀತಿ ಬೆಳೆದ ಬೆಳೆಯನ್ನು ನಾಶ ಮಾಡಿ ವಿಕೃತಿ ಮೆರೆದಿರೋದು ಖಂಡನೀಯ. ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ನೀಡಿ ರೈತನಿಗೆ ಆಗಿರುವ ನಷ್ಟ ಭರಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಲಿ ಅನ್ನೋದು ನಮ್ಮ ಆಶಯ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more