Kolar:  5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Kolar: 5 ಎಕರೆ ಜಮೀನಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ನಾಶ ಮಾಡಿದ ದುಷ್ಕರ್ಮಿಗಳು: ಕಂಗಾಲಾದ ರೈತ

Suvarna News   | Asianet News
Published : Feb 23, 2022, 08:51 AM IST

*  ಬೇರೆಯವರ ಜಮೀನು ಗುತ್ತಿಗೆ ಪಡೆದು ಬೆವರು ಸುರಿಸಿ ಸಂಪಾದನೆ ಮಾಡ್ತಿದ್ದ ಕೃಷಿಕ
*  ದೊಣ್ಣೆ, ಮಚ್ಚು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿ ವಿಕೃತಿ 
*  ಇನ್ನೇನು 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಕಲ್ಲಂಗಡಿ ಹಣ್ಣು ನಾಶ
 

ಕೋಲಾರ(ಫೆ.23):  ಕೋಲಾರ ತಾಲೂಕಿನ ಹೊರಟಿ ಅಗ್ರಹಾರ ಗ್ರಾಮದಲ್ಲಿ 5 ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಸಾಲಸೋಲ ಮಾಡಿ ಕಲ್ಲಂಗಡಿ ಹಣ್ಣನ್ನು ಬೆಳೆದಿರುವ ರೈತ ಅಂಬರೀಷ್‌ನ ಬೆಳೆವಣಿಗೆಯನ್ನು ಸಹಿಸಲಾಗದೆ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.  ಹೌದು,  ತಡರಾತ್ರಿ ಕಲ್ಲಂಗಡಿ ಹಣ್ಣಿನ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ದೊಣ್ಣೆ ಹಾಗೂ ಮಚ್ಚನ್ನು ಬಳಸಿ ಮನಬಂದಂತೆ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಹಾಕಿದ್ದಾರೆ. ಬೆಳಿಗ್ಗೆ ಎಂದಿನಂತೆ ತೋಟಕ್ಕೆ ಬಂದ ಅಂಬರೀಷ್‌ಗೆ ಕಣ್ಣಾರೆ ಕಂಡು ಒಂದು ಕ್ಷಣ ಶಾಕ್ ಆಗಿದೆ.

ಇನ್ನು 25 ರಿಂದ 30 ಸಾವಿರ ಮೌಲ್ಯದ ಕಲ್ಲಂಗಡಿ ಹಣ್ಣುಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಸಣ್ಣಪುಟ್ಟ ಕಾಯಿಗಳನ್ನು ಬಿಟ್ಟು, ಬೇಕು ಅಂತಾಲೇ 15 ದಿನಗಳಲ್ಲಿ ಕಟಾವು ಮಾಡಿ ಮಾರಾಟ ಮಾಡಬೇಕಿದ್ದ ಹಣ್ಣನ್ನು ನಾಶ ಮಾಡಿದ್ದು, ರೈತ ಅಂಬರೀಷ್ ಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎನ್ನುವಂತಾಗಿದೆ. ರಾತ್ರಿ 9 ಗಂಟವರೆಗೂ ಇಲ್ಲೇ ಕಾವಲು ಕಾದು ಮನೆಗೆ ಹೋಗಿದ್ದ ಅಂಬರೀಷ್ ಬೆಳಿಗ್ಗೆ ಬಂದು ನೋಡೋಷ್ಟರಲ್ಲಿ 700 ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳು ನಾಶವಾಗಿರೋದನ್ನು ಕಂಡು ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಈ ಬಗ್ಗೆ ಕೆಲವರ ಮೇಲೆ ಅನುಮಾನವಿದ್ದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧಾರ ಮಾಡಿದ್ದಾರೆ.

News Hour : ಹರ್ಷ ಹತ್ಯೆ ನಂತರ ಬೆಳಿಗೆ ಬರುತ್ತಿರುವ ಆಘಾತಕಾರಿ ಅಂಶಗಳು!

ಅದೇನೇ ದ್ವೇಷ ಇದ್ರು ಸಹ ಈ ರೀತಿ ಬೆಳೆದ ಬೆಳೆಯನ್ನು ನಾಶ ಮಾಡಿ ವಿಕೃತಿ ಮೆರೆದಿರೋದು ಖಂಡನೀಯ. ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ನೀಡಿ ರೈತನಿಗೆ ಆಗಿರುವ ನಷ್ಟ ಭರಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಲಿ ಅನ್ನೋದು ನಮ್ಮ ಆಶಯ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more