ದದ್ದಲ್‌ಗೆ ಮುಳುವಾಗುತ್ತಾ ಆಸ್ತಿ ವ್ಯವಹಾರ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ಶಾಸಕರು ಮಾರಾಟ ಮಾಡಿದ್ದು ಏಕೆ?

ದದ್ದಲ್‌ಗೆ ಮುಳುವಾಗುತ್ತಾ ಆಸ್ತಿ ವ್ಯವಹಾರ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ಶಾಸಕರು ಮಾರಾಟ ಮಾಡಿದ್ದು ಏಕೆ?

Published : Jul 16, 2024, 11:49 AM ISTUpdated : Jul 16, 2024, 11:50 AM IST

ರಾಯಚೂರು ತಾ. ಚಂದ್ರಬಂಡಾ ಹೋಬಳಿ ಯಾಪಲದಿನ್ನಿ ಗ್ರಾಮದ ಜಮೀನು
ದದ್ದಲ್ ಮಗಳು ಅನ್ನಪೂರ್ಣ ಹೆಸರಿನ ಜಮೀನು ಕೃಷ್ಣ ನಾಯಕ್ ಹೆಸರಿಗೆ ಬದಲು
ಭೂ ದಾಖಲೆಗಳಲ್ಲಿ ಹೆಸರು ಬದಲಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರಾ ದದ್ದಲ್?

ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ  ದಾಳಿ(ED raid) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳು(Property documents) ಪತ್ತೆಯಾಗಿವೆ. ದದ್ದಲ್ ಪತ್ನಿ, ಮಗ ಮತ್ತು ಮಗಳ ಹೆಸರಿನ ಜಮೀನಿನ ದಾಖಲೆಗಳು ಪತ್ತೆಯಾಗಿವೆ. ವಾಲ್ಮೀಕಿ ಹಗರಣ ಹೊರಬರುತ್ತಿದ್ದಂತೆ ಜಮೀನಿನ ದಾಖಲೆಗಳು ಬದಲಾಗಿವೆ. ಮಗಳ ಹೆಸರಿನಲ್ಲಿ ಖರೀದಿ ಮಾಡಿದ ಭೂಮಿಯನ್ನು ಬೇರೆಯವರ ಹೆಸರಿಗೆ ಬದಲು ಮಾಡಲಾಗಿದೆ. 9.84 ಎಕರೆ ಭೂಮಿ  5 ತಿಂಗಳಲ್ಲಿ ಬೇರೆಯವರ ಹೆಸರಿಗೆ ಬದಲಾವಣೆ ಮಾಡಲಾಗಿದೆ. ಜನವರಿ 30ರಂದು ದದ್ದಲ್(MLA Basanagouda Daddal) ಕೊನೆಯ ಮಗಳು ಅನ್ನಪೂರ್ಣಗೆ ಭೂಮಿ(Land) ಮ್ಯುಟೇಶನ್ ಮಾಡಲಾಗಿದೆ. ಮೇ.26 ರಂದು ವಾಲ್ಮೀಕಿ ‌ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿ ಆತ್ಮಹತ್ಯೆ ಆಗುತ್ತಿದ್ದಂತೆ ಶಾಸಕ ಬಸನಗೌಡ ದದ್ದಲ್ ಅಲರ್ಟ್ ಆಗಿದ್ದು, ತನ್ನ ಮಗಳ ಹೆಸರಿನಲ್ಲಿ ‌ ಇದ್ದ ಭೂಮಿ ಬೇರೆಯವರ ಹೆಸರಿನಲ್ಲಿ ನೋಂದಣಿ ಮಾಡಿಸಿದ್ದಾರೆ. ಜೂನ್ 25ರಂದು ಮಗಳ  ಹೆಸರಿನಲ್ಲಿದ್ದ ಭೂಮಿ ಕೃಷ್ಣನಾಯಕ್‌ಗೆ  ಮ್ಯುಟೇಶನ್ ಮಾಡಲಾಗಿದೆ. 5 ಎಕರೆ ಮತ್ತು 3.34 ಗುಂಟೆ ಜಮೀನು ಜೂನ್ 14ರಂದು ಮುಟೇಶನ್ ಮಾಡಲಾಗಿದೆ. ದದ್ದಲ್ ಮಗಳ ಹೆಸರಿನ ಭೂ ದಾಖಲೆ ಬದಲಾವಣೆ ಕುರಿತು ಇ.ಡಿ ಸಮಗ್ರ ತನಿಖೆ ನಡೆಸುತ್ತಿದ್ದು, ದದ್ದಲ್ ಮಗಳ ಹೆಸರಿನ ಭೂಮಿ ಬೇರೆಯವರಿಗೆ ವರ್ಗಾವಣೆ ಮಾಡಿದ್ದು ಏಕೆ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ದದ್ದಲ್ ಮಾರಾಟ ಮಾಡಿದ್ದು ಏಕೆ? ಎಂಬ ಪ್ರಶ್ನೆಗಳು ಇದೀಗ ಕಾಡತೊಡಗಿವೆ.

ಇದನ್ನೂ ವೀಕ್ಷಿಸಿ:  ದರ್ಶನ್ ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್: ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಕೊಡಲು ಸಿದ್ಧತೆ !

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more