ದದ್ದಲ್‌ಗೆ ಮುಳುವಾಗುತ್ತಾ ಆಸ್ತಿ ವ್ಯವಹಾರ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ಶಾಸಕರು ಮಾರಾಟ ಮಾಡಿದ್ದು ಏಕೆ?

ದದ್ದಲ್‌ಗೆ ಮುಳುವಾಗುತ್ತಾ ಆಸ್ತಿ ವ್ಯವಹಾರ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ಶಾಸಕರು ಮಾರಾಟ ಮಾಡಿದ್ದು ಏಕೆ?

Published : Jul 16, 2024, 11:49 AM ISTUpdated : Jul 16, 2024, 11:50 AM IST

ರಾಯಚೂರು ತಾ. ಚಂದ್ರಬಂಡಾ ಹೋಬಳಿ ಯಾಪಲದಿನ್ನಿ ಗ್ರಾಮದ ಜಮೀನು
ದದ್ದಲ್ ಮಗಳು ಅನ್ನಪೂರ್ಣ ಹೆಸರಿನ ಜಮೀನು ಕೃಷ್ಣ ನಾಯಕ್ ಹೆಸರಿಗೆ ಬದಲು
ಭೂ ದಾಖಲೆಗಳಲ್ಲಿ ಹೆಸರು ಬದಲಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರಾ ದದ್ದಲ್?

ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ  ದಾಳಿ(ED raid) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳು(Property documents) ಪತ್ತೆಯಾಗಿವೆ. ದದ್ದಲ್ ಪತ್ನಿ, ಮಗ ಮತ್ತು ಮಗಳ ಹೆಸರಿನ ಜಮೀನಿನ ದಾಖಲೆಗಳು ಪತ್ತೆಯಾಗಿವೆ. ವಾಲ್ಮೀಕಿ ಹಗರಣ ಹೊರಬರುತ್ತಿದ್ದಂತೆ ಜಮೀನಿನ ದಾಖಲೆಗಳು ಬದಲಾಗಿವೆ. ಮಗಳ ಹೆಸರಿನಲ್ಲಿ ಖರೀದಿ ಮಾಡಿದ ಭೂಮಿಯನ್ನು ಬೇರೆಯವರ ಹೆಸರಿಗೆ ಬದಲು ಮಾಡಲಾಗಿದೆ. 9.84 ಎಕರೆ ಭೂಮಿ  5 ತಿಂಗಳಲ್ಲಿ ಬೇರೆಯವರ ಹೆಸರಿಗೆ ಬದಲಾವಣೆ ಮಾಡಲಾಗಿದೆ. ಜನವರಿ 30ರಂದು ದದ್ದಲ್(MLA Basanagouda Daddal) ಕೊನೆಯ ಮಗಳು ಅನ್ನಪೂರ್ಣಗೆ ಭೂಮಿ(Land) ಮ್ಯುಟೇಶನ್ ಮಾಡಲಾಗಿದೆ. ಮೇ.26 ರಂದು ವಾಲ್ಮೀಕಿ ‌ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿ ಆತ್ಮಹತ್ಯೆ ಆಗುತ್ತಿದ್ದಂತೆ ಶಾಸಕ ಬಸನಗೌಡ ದದ್ದಲ್ ಅಲರ್ಟ್ ಆಗಿದ್ದು, ತನ್ನ ಮಗಳ ಹೆಸರಿನಲ್ಲಿ ‌ ಇದ್ದ ಭೂಮಿ ಬೇರೆಯವರ ಹೆಸರಿನಲ್ಲಿ ನೋಂದಣಿ ಮಾಡಿಸಿದ್ದಾರೆ. ಜೂನ್ 25ರಂದು ಮಗಳ  ಹೆಸರಿನಲ್ಲಿದ್ದ ಭೂಮಿ ಕೃಷ್ಣನಾಯಕ್‌ಗೆ  ಮ್ಯುಟೇಶನ್ ಮಾಡಲಾಗಿದೆ. 5 ಎಕರೆ ಮತ್ತು 3.34 ಗುಂಟೆ ಜಮೀನು ಜೂನ್ 14ರಂದು ಮುಟೇಶನ್ ಮಾಡಲಾಗಿದೆ. ದದ್ದಲ್ ಮಗಳ ಹೆಸರಿನ ಭೂ ದಾಖಲೆ ಬದಲಾವಣೆ ಕುರಿತು ಇ.ಡಿ ಸಮಗ್ರ ತನಿಖೆ ನಡೆಸುತ್ತಿದ್ದು, ದದ್ದಲ್ ಮಗಳ ಹೆಸರಿನ ಭೂಮಿ ಬೇರೆಯವರಿಗೆ ವರ್ಗಾವಣೆ ಮಾಡಿದ್ದು ಏಕೆ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ದದ್ದಲ್ ಮಾರಾಟ ಮಾಡಿದ್ದು ಏಕೆ? ಎಂಬ ಪ್ರಶ್ನೆಗಳು ಇದೀಗ ಕಾಡತೊಡಗಿವೆ.

ಇದನ್ನೂ ವೀಕ್ಷಿಸಿ:  ದರ್ಶನ್ ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್: ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ಕೊಡಲು ಸಿದ್ಧತೆ !

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more