ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

Published : May 10, 2023, 04:16 PM IST

ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

ದಶದಿಕ್ಕುಗಳಲ್ಲಿ ಪ್ರಕೃತಿ ವಿಕೋಪಕ್ಕೆ ಎಲ್ಲವೂ ಸರ್ವನಾಶವಾಗುತ್ತಿದೆ.  ಪ್ರಕೃತಿ ಮುನಿಸಿಕೊಂಡರೆ ಅದು ನಿಜಕ್ಕೂ ಮನುಕುಲದ ನಾಶಕ್ಕೆ ದಾರಿ ಎಂಬ ಮಾತು ಜನಜನಿತ. ಮನುಷ್ಯನ ಅತಿ ಆಸೆಯಿಂದಾಗಿ ಅಥವಾ ಆತನ ಸೌಕರ್ಯಕ್ಕಾಗಿ ಇನ್ನಿಲ್ಲದಂತೆ ಅರಣ್ಯವನ್ನು ದೋಚುತ್ತಿರುವುದು ಪ್ರಕೃತಿ ವಿಕೋಪಕ್ಕೆ ಜ್ವಲಂತ ಸಾಕ್ಷಿ. ಇದರ ಪರಿಣಾಮ ಇಂದು ನಾವು ಹಲವು ಪ್ರಕೃತಿ ವಿಕೋಪಕ್ಕೆ ಬಲಿಯಾಗುತ್ತಿದ್ದೇವೆ. ಮೇ ತಿಂಗಳು ಬರುತ್ತಿದ್ದಂತೆ  ದಿಢೀರ್ ವಾತಾವರಣ ಬದಲಾಗಿ ಬಿಟ್ಟಿದೆ. ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಅನ್ನೋ ಸೈತಾನ್ ಹುಟ್ಟಿಕೊಂಡಿದೆ. ಗಂಟೆಗೆ 130 ಕಿ.ಮೀ ವೇಗದಲ್ಲಿ ಮೋಚಾ ಚಂಡಮಾರುತ ಬಂಗಾಳ ಕೊಲ್ಲಿ ಸಮುದ್ರಕ್ಕೆ ಬಂದಪ್ಪಳಿಸಿದೆ.ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ  ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ.ಮುಂದಿನ 3 ದಿನಗಳ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಪ್ರವಾಸೋದ್ಯಮ  ಚಟುವಟಿಕೆಗಳನ್ನು ನಿಲ್ಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಚಂಡಮಾರುತದ ರಚನೆಯ ಪರಿಣಾಮವಾಗಿ, 3 ದಿನ ಭಾರೀ ಗಾಳಿ, ಮಿಂಚು ಮತ್ತು ಗುಡುಗು ಸಹಿತ  ಭಾರೀ ಮಳೆಯಾಗುವ ನಿರೀಕ್ಷೆಯಿದೆ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more