ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

Published : May 10, 2023, 04:16 PM IST

ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

ದಶದಿಕ್ಕುಗಳಲ್ಲಿ ಪ್ರಕೃತಿ ವಿಕೋಪಕ್ಕೆ ಎಲ್ಲವೂ ಸರ್ವನಾಶವಾಗುತ್ತಿದೆ.  ಪ್ರಕೃತಿ ಮುನಿಸಿಕೊಂಡರೆ ಅದು ನಿಜಕ್ಕೂ ಮನುಕುಲದ ನಾಶಕ್ಕೆ ದಾರಿ ಎಂಬ ಮಾತು ಜನಜನಿತ. ಮನುಷ್ಯನ ಅತಿ ಆಸೆಯಿಂದಾಗಿ ಅಥವಾ ಆತನ ಸೌಕರ್ಯಕ್ಕಾಗಿ ಇನ್ನಿಲ್ಲದಂತೆ ಅರಣ್ಯವನ್ನು ದೋಚುತ್ತಿರುವುದು ಪ್ರಕೃತಿ ವಿಕೋಪಕ್ಕೆ ಜ್ವಲಂತ ಸಾಕ್ಷಿ. ಇದರ ಪರಿಣಾಮ ಇಂದು ನಾವು ಹಲವು ಪ್ರಕೃತಿ ವಿಕೋಪಕ್ಕೆ ಬಲಿಯಾಗುತ್ತಿದ್ದೇವೆ. ಮೇ ತಿಂಗಳು ಬರುತ್ತಿದ್ದಂತೆ  ದಿಢೀರ್ ವಾತಾವರಣ ಬದಲಾಗಿ ಬಿಟ್ಟಿದೆ. ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಅನ್ನೋ ಸೈತಾನ್ ಹುಟ್ಟಿಕೊಂಡಿದೆ. ಗಂಟೆಗೆ 130 ಕಿ.ಮೀ ವೇಗದಲ್ಲಿ ಮೋಚಾ ಚಂಡಮಾರುತ ಬಂಗಾಳ ಕೊಲ್ಲಿ ಸಮುದ್ರಕ್ಕೆ ಬಂದಪ್ಪಳಿಸಿದೆ.ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ  ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ.ಮುಂದಿನ 3 ದಿನಗಳ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಪ್ರವಾಸೋದ್ಯಮ  ಚಟುವಟಿಕೆಗಳನ್ನು ನಿಲ್ಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಚಂಡಮಾರುತದ ರಚನೆಯ ಪರಿಣಾಮವಾಗಿ, 3 ದಿನ ಭಾರೀ ಗಾಳಿ, ಮಿಂಚು ಮತ್ತು ಗುಡುಗು ಸಹಿತ  ಭಾರೀ ಮಳೆಯಾಗುವ ನಿರೀಕ್ಷೆಯಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more