ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

Published : Oct 06, 2023, 11:36 AM IST

ಅವರೆಲ್ಲಾ ಮಂಗಳೂರು ಮಹಾನಗರ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು. ತಮ್ಮ ಜೀವನದ ಬಂಡಿ ಸಾಗಿಸಲು ಬೀದಿಬದಿ ವ್ಯಾಪಾರವನ್ನು ಆಶ್ರಯಿಸಿದ್ದವರು ದಿಢೀರ್ ಆಗಿ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದ್ರು. 

ಕೈಯಲ್ಲಿ ಅರ್ಜಿಯ ಪ್ರತಿ ಹಿಡ್ಕೊಂಡು ಮಹಾನಗರ ಪಾಲಿಕೆ ಮುಂದೆ ಜಮಾಯಿಸಿದ ಜನ. ಕಮೀಷನರ್ ಕಚೇರಿಗೆ ಮುತ್ತಿಗೆ ಯತ್ನ. ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ..ಈ ದೃಶ್ಯ ಕಂಡು ಬಂದಿದ್ದು ಮಂಗಳೂರು ಮಹಾನಗರ ಪಾಳಿಕೆ (Mangalore Municipal Corporation) ಎದುರು. ಇವರೆಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು(Traders), ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆ ನೀಡಿ ವರ್ಷ ಕಳೆದ್ರೂ ಇವರಿಗೆ ಗುರುತಿನ ಚೀಟಿ ಸಿಕ್ಕಿಲ್ಲ. ಎಷ್ಟೇ ಮನವಿ ಮಾಡಿದ್ರು, ಪ್ರತಿಭಟನೆ ನಡೆಸಿದ್ರು ಗುರುತಿನ ಚೀಟಿ(Identity Card) ನೀಡಿಲ್ಲ.ಹೀಗಾಗಿ ಕಮೀಷನರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.  2021ರಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ 667 ಮಂದಿಯನ್ನು ಅಧಿಕೃತ ಬೀದಿಬದಿ ವ್ಯಾಪಾರಿಗಳೆಂದು ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆಗೊಳಿಸಿದೆ. ಆದ್ರೂ ಅನುಮೋದನೆಗೊಂಡ 667 ವ್ಯಾಪಾರಿಗಳಿಗೆ ಗುರುತಿನ ಚೀಟಿ, ಪ್ರಮಾಣಪತ್ರ ನೀಡಿಲ್ಲ. ಇದರಿಂದ ಸಿಟ್ಟಿಗೆದ್ದು ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ್ರು. ಇದರಿಂದ ಎಚ್ಚೆತ್ತ ಕಮಿಷನರ್ ಈ ತಿಂಗಳೊಳಗೆ ಮೇಯರ್ ಹಾಗೂ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾರ್ಯಕ್ರಮ ಮಾಡಿ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಸುವುದಾಗಿ ಭರವಸೆ ನೀಡಿದ್ರು. ಕೊಟ್ಟ ಮಾತಿನಂತೆ ಭರವಸೆ ಈಡೇರಿಸಬೇಕು,.. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಕನ್ನಡ ರಾಜ್ಯೋತ್ಸವ ದಿನ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ, ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ವ್ಯಾಪಾರಿಗಳು ಎಚ್ಚರಿಸಿದ್ರು.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!