ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

Published : Oct 06, 2023, 11:36 AM IST

ಅವರೆಲ್ಲಾ ಮಂಗಳೂರು ಮಹಾನಗರ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು. ತಮ್ಮ ಜೀವನದ ಬಂಡಿ ಸಾಗಿಸಲು ಬೀದಿಬದಿ ವ್ಯಾಪಾರವನ್ನು ಆಶ್ರಯಿಸಿದ್ದವರು ದಿಢೀರ್ ಆಗಿ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದ್ರು. 

ಕೈಯಲ್ಲಿ ಅರ್ಜಿಯ ಪ್ರತಿ ಹಿಡ್ಕೊಂಡು ಮಹಾನಗರ ಪಾಲಿಕೆ ಮುಂದೆ ಜಮಾಯಿಸಿದ ಜನ. ಕಮೀಷನರ್ ಕಚೇರಿಗೆ ಮುತ್ತಿಗೆ ಯತ್ನ. ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ..ಈ ದೃಶ್ಯ ಕಂಡು ಬಂದಿದ್ದು ಮಂಗಳೂರು ಮಹಾನಗರ ಪಾಳಿಕೆ (Mangalore Municipal Corporation) ಎದುರು. ಇವರೆಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು(Traders), ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆ ನೀಡಿ ವರ್ಷ ಕಳೆದ್ರೂ ಇವರಿಗೆ ಗುರುತಿನ ಚೀಟಿ ಸಿಕ್ಕಿಲ್ಲ. ಎಷ್ಟೇ ಮನವಿ ಮಾಡಿದ್ರು, ಪ್ರತಿಭಟನೆ ನಡೆಸಿದ್ರು ಗುರುತಿನ ಚೀಟಿ(Identity Card) ನೀಡಿಲ್ಲ.ಹೀಗಾಗಿ ಕಮೀಷನರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.  2021ರಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ 667 ಮಂದಿಯನ್ನು ಅಧಿಕೃತ ಬೀದಿಬದಿ ವ್ಯಾಪಾರಿಗಳೆಂದು ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆಗೊಳಿಸಿದೆ. ಆದ್ರೂ ಅನುಮೋದನೆಗೊಂಡ 667 ವ್ಯಾಪಾರಿಗಳಿಗೆ ಗುರುತಿನ ಚೀಟಿ, ಪ್ರಮಾಣಪತ್ರ ನೀಡಿಲ್ಲ. ಇದರಿಂದ ಸಿಟ್ಟಿಗೆದ್ದು ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ್ರು. ಇದರಿಂದ ಎಚ್ಚೆತ್ತ ಕಮಿಷನರ್ ಈ ತಿಂಗಳೊಳಗೆ ಮೇಯರ್ ಹಾಗೂ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾರ್ಯಕ್ರಮ ಮಾಡಿ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಸುವುದಾಗಿ ಭರವಸೆ ನೀಡಿದ್ರು. ಕೊಟ್ಟ ಮಾತಿನಂತೆ ಭರವಸೆ ಈಡೇರಿಸಬೇಕು,.. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಕನ್ನಡ ರಾಜ್ಯೋತ್ಸವ ದಿನ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ, ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ವ್ಯಾಪಾರಿಗಳು ಎಚ್ಚರಿಸಿದ್ರು.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!