ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

Published : Oct 06, 2023, 11:36 AM IST

ಅವರೆಲ್ಲಾ ಮಂಗಳೂರು ಮಹಾನಗರ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು. ತಮ್ಮ ಜೀವನದ ಬಂಡಿ ಸಾಗಿಸಲು ಬೀದಿಬದಿ ವ್ಯಾಪಾರವನ್ನು ಆಶ್ರಯಿಸಿದ್ದವರು ದಿಢೀರ್ ಆಗಿ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದ್ರು. 

ಕೈಯಲ್ಲಿ ಅರ್ಜಿಯ ಪ್ರತಿ ಹಿಡ್ಕೊಂಡು ಮಹಾನಗರ ಪಾಲಿಕೆ ಮುಂದೆ ಜಮಾಯಿಸಿದ ಜನ. ಕಮೀಷನರ್ ಕಚೇರಿಗೆ ಮುತ್ತಿಗೆ ಯತ್ನ. ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ..ಈ ದೃಶ್ಯ ಕಂಡು ಬಂದಿದ್ದು ಮಂಗಳೂರು ಮಹಾನಗರ ಪಾಳಿಕೆ (Mangalore Municipal Corporation) ಎದುರು. ಇವರೆಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು(Traders), ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆ ನೀಡಿ ವರ್ಷ ಕಳೆದ್ರೂ ಇವರಿಗೆ ಗುರುತಿನ ಚೀಟಿ ಸಿಕ್ಕಿಲ್ಲ. ಎಷ್ಟೇ ಮನವಿ ಮಾಡಿದ್ರು, ಪ್ರತಿಭಟನೆ ನಡೆಸಿದ್ರು ಗುರುತಿನ ಚೀಟಿ(Identity Card) ನೀಡಿಲ್ಲ.ಹೀಗಾಗಿ ಕಮೀಷನರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.  2021ರಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ 667 ಮಂದಿಯನ್ನು ಅಧಿಕೃತ ಬೀದಿಬದಿ ವ್ಯಾಪಾರಿಗಳೆಂದು ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆಗೊಳಿಸಿದೆ. ಆದ್ರೂ ಅನುಮೋದನೆಗೊಂಡ 667 ವ್ಯಾಪಾರಿಗಳಿಗೆ ಗುರುತಿನ ಚೀಟಿ, ಪ್ರಮಾಣಪತ್ರ ನೀಡಿಲ್ಲ. ಇದರಿಂದ ಸಿಟ್ಟಿಗೆದ್ದು ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ್ರು. ಇದರಿಂದ ಎಚ್ಚೆತ್ತ ಕಮಿಷನರ್ ಈ ತಿಂಗಳೊಳಗೆ ಮೇಯರ್ ಹಾಗೂ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾರ್ಯಕ್ರಮ ಮಾಡಿ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಸುವುದಾಗಿ ಭರವಸೆ ನೀಡಿದ್ರು. ಕೊಟ್ಟ ಮಾತಿನಂತೆ ಭರವಸೆ ಈಡೇರಿಸಬೇಕು,.. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಕನ್ನಡ ರಾಜ್ಯೋತ್ಸವ ದಿನ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ, ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ವ್ಯಾಪಾರಿಗಳು ಎಚ್ಚರಿಸಿದ್ರು.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!