ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

ಮಂಗಳೂರಲ್ಲಿ ಸಿಡಿದೆದ್ದ ಬೀದಿಬದಿ ವ್ಯಾಪಾರಿಗಳು: ಪಾಲಿಕೆಗೆ ಮುತ್ತಿಗೆ ಯತ್ನ, ಅಧಿಕಾರಿಗಳ ವಿರುದ್ಧ ಆಕ್ರೋಶ

Published : Oct 06, 2023, 11:36 AM IST

ಅವರೆಲ್ಲಾ ಮಂಗಳೂರು ಮಹಾನಗರ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು. ತಮ್ಮ ಜೀವನದ ಬಂಡಿ ಸಾಗಿಸಲು ಬೀದಿಬದಿ ವ್ಯಾಪಾರವನ್ನು ಆಶ್ರಯಿಸಿದ್ದವರು ದಿಢೀರ್ ಆಗಿ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದ್ರು. 

ಕೈಯಲ್ಲಿ ಅರ್ಜಿಯ ಪ್ರತಿ ಹಿಡ್ಕೊಂಡು ಮಹಾನಗರ ಪಾಲಿಕೆ ಮುಂದೆ ಜಮಾಯಿಸಿದ ಜನ. ಕಮೀಷನರ್ ಕಚೇರಿಗೆ ಮುತ್ತಿಗೆ ಯತ್ನ. ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ..ಈ ದೃಶ್ಯ ಕಂಡು ಬಂದಿದ್ದು ಮಂಗಳೂರು ಮಹಾನಗರ ಪಾಳಿಕೆ (Mangalore Municipal Corporation) ಎದುರು. ಇವರೆಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು(Traders), ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆ ನೀಡಿ ವರ್ಷ ಕಳೆದ್ರೂ ಇವರಿಗೆ ಗುರುತಿನ ಚೀಟಿ ಸಿಕ್ಕಿಲ್ಲ. ಎಷ್ಟೇ ಮನವಿ ಮಾಡಿದ್ರು, ಪ್ರತಿಭಟನೆ ನಡೆಸಿದ್ರು ಗುರುತಿನ ಚೀಟಿ(Identity Card) ನೀಡಿಲ್ಲ.ಹೀಗಾಗಿ ಕಮೀಷನರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.  2021ರಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ 667 ಮಂದಿಯನ್ನು ಅಧಿಕೃತ ಬೀದಿಬದಿ ವ್ಯಾಪಾರಿಗಳೆಂದು ಪಟ್ಟಣ ವ್ಯಾಪಾರ ಸಮಿತಿ ಅನುಮೋದನೆಗೊಳಿಸಿದೆ. ಆದ್ರೂ ಅನುಮೋದನೆಗೊಂಡ 667 ವ್ಯಾಪಾರಿಗಳಿಗೆ ಗುರುತಿನ ಚೀಟಿ, ಪ್ರಮಾಣಪತ್ರ ನೀಡಿಲ್ಲ. ಇದರಿಂದ ಸಿಟ್ಟಿಗೆದ್ದು ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ್ರು. ಇದರಿಂದ ಎಚ್ಚೆತ್ತ ಕಮಿಷನರ್ ಈ ತಿಂಗಳೊಳಗೆ ಮೇಯರ್ ಹಾಗೂ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾರ್ಯಕ್ರಮ ಮಾಡಿ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಸುವುದಾಗಿ ಭರವಸೆ ನೀಡಿದ್ರು. ಕೊಟ್ಟ ಮಾತಿನಂತೆ ಭರವಸೆ ಈಡೇರಿಸಬೇಕು,.. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಕನ್ನಡ ರಾಜ್ಯೋತ್ಸವ ದಿನ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ, ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ವ್ಯಾಪಾರಿಗಳು ಎಚ್ಚರಿಸಿದ್ರು.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?