ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

Published : Jan 22, 2020, 06:30 PM ISTUpdated : Jan 22, 2020, 07:07 PM IST

ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮುಸ್ಲಿಂರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಂಘಟನೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಶಿವಮೊಗ್ಗ, (ಜ.22): ಬಳ್ಳಾರಿಯಲ್ಲಿ ಬಿಜೆಪಿ ಶಾಸಕ  ಜಿ.ಸೋಮಶೇಖರ ರೆಡ್ಡಿ, ಮುಸ್ಲಿಂ ಸಮುದಾಯದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾಯ್ತು. ಈಗ  ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸರದಿ. ಒಂದಲ್ಲ ಒಂದು ವಿವಾದಲ್ಲಿರುವ ರೇಣುಕಾಚಾರ್ಯ ಈಗ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

'ಮುಸ್ಲಿಮರ ಕೇರಿಗೆ ಬಂದ ಹಣ ಹಿಂದುಗಳ ಕೇರಿಗೆ ನೀಡುವೆ' 

ಮೊನ್ನೆ ಹೊನ್ನಾಳಿಯಲ್ಲಿ ನಡೆದ  ಸಿಎಎ ಜಾಗೃತಿ ಸಮಾವೇಶದಲ್ಲಿ ರೇಣುಕಾಚಾರ್ಯ ಅವರು ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡುತ್ತಾರೆ. ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲೇ ಇಡುತ್ತೇವೆ, ಮುಸ್ಲಿಂ ಕೇರಿಗೆ ಬಂದ ಅನುದಾನವನ್ನು ಹಿಂದೂಗಳ ಕೇರಿಗೆ ಹಾಕಿ ಅವರನ್ನು ಅಭಿವೃದ್ಧಿ ಮಾಡುತ್ತೇನೆ. ಇನ್ಮುಂದೆ ರಾಜಕಾರಣ ಏನು ಎನ್ನುವುದನ್ನು ಮಾಡಿ ತೋರಿಸುತ್ತೇನೆ ಎಂದು ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋನಕಾರಿ ಭಾಷಣ ಮಾಡಿದ್ದರು. ಇದರಿಂದ ಶಿವಮೊಗ್ಗದಲ್ಲಿ ಇಂದು (ಬುಧವಾರ) ಮುಸ್ಲಿಂ ಸಮುದಾಯ ಸಿಡಿದೆದ್ದಿದ್ದು, ರೇಣುಕಾಚಾರ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?