ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ರೇಣುಕಾಚಾರ್ಯ ವಿರುದ್ಧ ಸಿಡಿದೆದ್ದ ಮುಸ್ಲಿಮರು

Published : Jan 22, 2020, 06:30 PM ISTUpdated : Jan 22, 2020, 07:07 PM IST

ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮುಸ್ಲಿಂರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಂಘಟನೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಶಿವಮೊಗ್ಗ, (ಜ.22): ಬಳ್ಳಾರಿಯಲ್ಲಿ ಬಿಜೆಪಿ ಶಾಸಕ  ಜಿ.ಸೋಮಶೇಖರ ರೆಡ್ಡಿ, ಮುಸ್ಲಿಂ ಸಮುದಾಯದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾಯ್ತು. ಈಗ  ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸರದಿ. ಒಂದಲ್ಲ ಒಂದು ವಿವಾದಲ್ಲಿರುವ ರೇಣುಕಾಚಾರ್ಯ ಈಗ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

'ಮುಸ್ಲಿಮರ ಕೇರಿಗೆ ಬಂದ ಹಣ ಹಿಂದುಗಳ ಕೇರಿಗೆ ನೀಡುವೆ' 

ಮೊನ್ನೆ ಹೊನ್ನಾಳಿಯಲ್ಲಿ ನಡೆದ  ಸಿಎಎ ಜಾಗೃತಿ ಸಮಾವೇಶದಲ್ಲಿ ರೇಣುಕಾಚಾರ್ಯ ಅವರು ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡುತ್ತಾರೆ. ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲೇ ಇಡುತ್ತೇವೆ, ಮುಸ್ಲಿಂ ಕೇರಿಗೆ ಬಂದ ಅನುದಾನವನ್ನು ಹಿಂದೂಗಳ ಕೇರಿಗೆ ಹಾಕಿ ಅವರನ್ನು ಅಭಿವೃದ್ಧಿ ಮಾಡುತ್ತೇನೆ. ಇನ್ಮುಂದೆ ರಾಜಕಾರಣ ಏನು ಎನ್ನುವುದನ್ನು ಮಾಡಿ ತೋರಿಸುತ್ತೇನೆ ಎಂದು ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋನಕಾರಿ ಭಾಷಣ ಮಾಡಿದ್ದರು. ಇದರಿಂದ ಶಿವಮೊಗ್ಗದಲ್ಲಿ ಇಂದು (ಬುಧವಾರ) ಮುಸ್ಲಿಂ ಸಮುದಾಯ ಸಿಡಿದೆದ್ದಿದ್ದು, ರೇಣುಕಾಚಾರ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ