ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !

ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !

Published : Nov 22, 2023, 10:18 AM IST

ಸಾಮಾನ್ಯವಾಗಿ ಮುಸ್ಲಿಂ ಸಮುದಾಯದವರು ಹಿಂದೂ ದೇವಾಲಯಗಳಿಗೆ ಹೋಗುವುದು ವಿರಳ.‌ ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಸ್ವತಃ ಹಣದಲ್ಲಿ ಹಿಂದೂ ದೇವಾಲಯವನ್ನೇ ನಿರ್ಮಿಸಿದ್ದಾನೆ.‌ಈ ಮೂಲಕ ಆ ಯುವಕ ಕೊಮುಸಾಮರಸ್ಯಕ್ಕೆ ಸಾಕ್ಷಿಯಾಗಿದ್ದಾನೆ.‌ 


ಸುಸಜ್ಜಿತವಾಗಿ ನಿರ್ಮಾಣವಾದ ಗಾಳೆಮ್ಮ ದೇಗುಲ. ದೇಗುಲ ಉದ್ಘಾಟನೆ ಸಂಭ್ರಮದಲ್ಲಿ ಮುಳುಗಿದ ಊರ ಮಂದಿ.. ಹೋಮ ಹವನ, ಪೂಜೆ ಪುನಸ್ಕಾರ.. ಇಡಿ ಊರಿಗೆ ಊರೆ ಸಂಭ್ರಮದಲ್ಲಿ ಮುಳುಗಿದ ದೃಶ್ಯ ಇದು. ಸಾಮಾನ್ಯವಾಗಿ ಹೊಸದಾಗಿ ದೇಗುಲ ಉದ್ಘಾಟನೆ ಕಾರ್ಯಕ್ರಮ ಅಂದ್ರೆ ಊರ ಮಂದಿಯೆಲ್ಲ ಖುಷಿ ಪಡೋದು ಕಾಮನ್ ಅದ್ರೆ, ಕೊಪ್ಪಳ(Koppal) ತಾಲೂಕಿನ ನರೇಗಲ್ ಗ್ರಾಮದಲ್ಲಿನ ಈ ದೇಗುಲ ಉದ್ಘಾಟನೆ ಕಾರ್ಯಕ್ರಮದ ಸಂಭ್ರಮದ ಹಿಂದೆ ಇನ್ನೂ ಒಂದು ವಿಶೇಷತೆ ಇದೆ. ಅದೇನಂದ್ರೆ ಈ ದೇಗುಲ ಕಟ್ಟಿಸಿದ್ದು ಒಬ್ಬ ಮುಸ್ಲಿಂ ಯುವಕ(Muslim Youth). ಹೌದು ಹಿಂದೂ ದೇಗುಲವನ್ನು ಮುಸ್ಲಿಂ ಯುವಕ ಇಮಾಮ್ ಸಾಬ್ ಎಂಬಾತ ಸ್ವಂತ ಹಣದಲ್ಲಿ ನಿರ್ಮಿಸಿಕೊಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶ ಸಾರಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಗಾಳೆಮ್ಮ ದೇಗುಲ ಬಿದ್ದು ಹೋಗಿತ್ತು. ದೇಗುಲ ಮರು ನಿರ್ಮಾಣಕ್ಕೆ ನಿರ್ಧರಿಸಿದ ಗ್ರಾಮಸ್ಥರು, ಮರಳು ಗಣಿಗಾರಿಕೆ ಗುತ್ತಿಗೆ ಹಿಡಿದಿದ್ದ ಇಮಾಮ್ ಸಾಬ್(Imam saab) ಬಳಿ ಬಂದು ಮರಳು ಕೇಳಿದ್ದಾರೆ. ಆಗ ಇಮಾಮ್ ಸಾಬ್ ಮರಳು ಯಾಕೆ. ನಾನೇ ದೇವಾಲಯ ನಿರ್ಮಿಸಿ ಕೊಡುತ್ತೇನೆ ಎಂದು ಭರವಸೆ ಕೊಟ್ಟಿದ್ದರಂತೆ. ಕೊಟ್ಟ ಮಾತಿನಂತೆ ಇಮಾಮ್ ಸಾಬ್ 25 ಲಕ್ಷ ಖರ್ಚು ಮಾಡಿ ದೇಗುಲ ನಿರ್ಮಿಸಿಕೊಟ್ಟಿದ್ದಾರೆ. ನಿನ್ನೆ ದೇಗುಲ ಉದ್ಘಾಟನೆಯೂ ನಡೀತು. ಇಮಾಮ್ ಸಾಬ್ ಮೂಲತಃ ಗದಗ್ನ ರಾಜೀವ ಗಾಂಧಿ ನಗರದ ನಿವಾಸಿ. ‌ಕಳೆದ ನಾಲ್ಕೈದು ವರ್ಷಗಳಿಂದ ಕೊಪ್ಪಳದ ನರೇಗಲ್ನಲ್ಲಿ ಮರಳು ಗುತ್ತಿಗೆದಾರಿಕೆ ಮಾಡುತ್ತಿದ್ದಾರೆ.. ಈಗ ನರೇಗಲ್ ಗ್ರಾಮದಲ್ಲಿ ಗಾಳೆಮ್ಮ ದೇಗುಲ ನಿರ್ಮಿಸಿಕೊಡುವ ಮೂಲಕ ಗ್ರಾಮಸ್ಥರಿಗೆ  ಮತ್ತಷ್ಟು ಹತ್ತಿರವಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more