ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !

ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್‌ ಸಾಬ್‌ !

Published : Nov 22, 2023, 10:18 AM IST

ಸಾಮಾನ್ಯವಾಗಿ ಮುಸ್ಲಿಂ ಸಮುದಾಯದವರು ಹಿಂದೂ ದೇವಾಲಯಗಳಿಗೆ ಹೋಗುವುದು ವಿರಳ.‌ ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಸ್ವತಃ ಹಣದಲ್ಲಿ ಹಿಂದೂ ದೇವಾಲಯವನ್ನೇ ನಿರ್ಮಿಸಿದ್ದಾನೆ.‌ಈ ಮೂಲಕ ಆ ಯುವಕ ಕೊಮುಸಾಮರಸ್ಯಕ್ಕೆ ಸಾಕ್ಷಿಯಾಗಿದ್ದಾನೆ.‌ 


ಸುಸಜ್ಜಿತವಾಗಿ ನಿರ್ಮಾಣವಾದ ಗಾಳೆಮ್ಮ ದೇಗುಲ. ದೇಗುಲ ಉದ್ಘಾಟನೆ ಸಂಭ್ರಮದಲ್ಲಿ ಮುಳುಗಿದ ಊರ ಮಂದಿ.. ಹೋಮ ಹವನ, ಪೂಜೆ ಪುನಸ್ಕಾರ.. ಇಡಿ ಊರಿಗೆ ಊರೆ ಸಂಭ್ರಮದಲ್ಲಿ ಮುಳುಗಿದ ದೃಶ್ಯ ಇದು. ಸಾಮಾನ್ಯವಾಗಿ ಹೊಸದಾಗಿ ದೇಗುಲ ಉದ್ಘಾಟನೆ ಕಾರ್ಯಕ್ರಮ ಅಂದ್ರೆ ಊರ ಮಂದಿಯೆಲ್ಲ ಖುಷಿ ಪಡೋದು ಕಾಮನ್ ಅದ್ರೆ, ಕೊಪ್ಪಳ(Koppal) ತಾಲೂಕಿನ ನರೇಗಲ್ ಗ್ರಾಮದಲ್ಲಿನ ಈ ದೇಗುಲ ಉದ್ಘಾಟನೆ ಕಾರ್ಯಕ್ರಮದ ಸಂಭ್ರಮದ ಹಿಂದೆ ಇನ್ನೂ ಒಂದು ವಿಶೇಷತೆ ಇದೆ. ಅದೇನಂದ್ರೆ ಈ ದೇಗುಲ ಕಟ್ಟಿಸಿದ್ದು ಒಬ್ಬ ಮುಸ್ಲಿಂ ಯುವಕ(Muslim Youth). ಹೌದು ಹಿಂದೂ ದೇಗುಲವನ್ನು ಮುಸ್ಲಿಂ ಯುವಕ ಇಮಾಮ್ ಸಾಬ್ ಎಂಬಾತ ಸ್ವಂತ ಹಣದಲ್ಲಿ ನಿರ್ಮಿಸಿಕೊಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶ ಸಾರಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಗಾಳೆಮ್ಮ ದೇಗುಲ ಬಿದ್ದು ಹೋಗಿತ್ತು. ದೇಗುಲ ಮರು ನಿರ್ಮಾಣಕ್ಕೆ ನಿರ್ಧರಿಸಿದ ಗ್ರಾಮಸ್ಥರು, ಮರಳು ಗಣಿಗಾರಿಕೆ ಗುತ್ತಿಗೆ ಹಿಡಿದಿದ್ದ ಇಮಾಮ್ ಸಾಬ್(Imam saab) ಬಳಿ ಬಂದು ಮರಳು ಕೇಳಿದ್ದಾರೆ. ಆಗ ಇಮಾಮ್ ಸಾಬ್ ಮರಳು ಯಾಕೆ. ನಾನೇ ದೇವಾಲಯ ನಿರ್ಮಿಸಿ ಕೊಡುತ್ತೇನೆ ಎಂದು ಭರವಸೆ ಕೊಟ್ಟಿದ್ದರಂತೆ. ಕೊಟ್ಟ ಮಾತಿನಂತೆ ಇಮಾಮ್ ಸಾಬ್ 25 ಲಕ್ಷ ಖರ್ಚು ಮಾಡಿ ದೇಗುಲ ನಿರ್ಮಿಸಿಕೊಟ್ಟಿದ್ದಾರೆ. ನಿನ್ನೆ ದೇಗುಲ ಉದ್ಘಾಟನೆಯೂ ನಡೀತು. ಇಮಾಮ್ ಸಾಬ್ ಮೂಲತಃ ಗದಗ್ನ ರಾಜೀವ ಗಾಂಧಿ ನಗರದ ನಿವಾಸಿ. ‌ಕಳೆದ ನಾಲ್ಕೈದು ವರ್ಷಗಳಿಂದ ಕೊಪ್ಪಳದ ನರೇಗಲ್ನಲ್ಲಿ ಮರಳು ಗುತ್ತಿಗೆದಾರಿಕೆ ಮಾಡುತ್ತಿದ್ದಾರೆ.. ಈಗ ನರೇಗಲ್ ಗ್ರಾಮದಲ್ಲಿ ಗಾಳೆಮ್ಮ ದೇಗುಲ ನಿರ್ಮಿಸಿಕೊಡುವ ಮೂಲಕ ಗ್ರಾಮಸ್ಥರಿಗೆ  ಮತ್ತಷ್ಟು ಹತ್ತಿರವಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಸಿಯುವ ಹಂತದಲ್ಲಿ ಶಾಲಾ ಮೇಲ್ಛಾವಣಿ.. ಸಂಜೆ ಆಗ್ತಿದ್ದಂತೆ ಪುಂಡರ ಅಡ್ಡೆಯಾಗುತ್ತೆ ಶಾಲಾ ಮೈದಾನ!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more