Hassan Mixi Blast: ನಿನ್ನೆ ಪತ್ನಿಗೆ ಅವಳಿ ಜವಳಿ ಮಕ್ಕಳಾಗಿದ್ದರೂ ಮುಖ ನೋಡಲಾಗಿಲ್ಲ: ಗಾಯಾಳು ಶಶಿ ಅಳಲು

Hassan Mixi Blast: ನಿನ್ನೆ ಪತ್ನಿಗೆ ಅವಳಿ ಜವಳಿ ಮಕ್ಕಳಾಗಿದ್ದರೂ ಮುಖ ನೋಡಲಾಗಿಲ್ಲ: ಗಾಯಾಳು ಶಶಿ ಅಳಲು

Published : Dec 28, 2022, 06:06 PM ISTUpdated : Dec 28, 2022, 06:07 PM IST

ಮಿಕ್ಸಿ ಸ್ಪೋಟ ಪ್ರಕರಣದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದರೆ, ನನ್ನ ಪತ್ನಿಗೆ ನಿನ್ನೆ ಬೇರೊಂದು ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು, ಅವಳಿ ಜವಳಿ ಮಕ್ಕಳು ಜನಿಸಿವೆ. ನಾನು ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಂಡತಿ ಮತ್ತು ಮಕ್ಕಳ ಮುಖ ನೋಡಲಾಗಿಲ್ಲ ಎಂದು ಗಾಯಾಳು ಶಶಿ ಅಳಲು ತೋಡಿಕೊಂಡಿದ್ದಾನೆ.

ಹಾಸನ (ಡಿ.28): ಕಳೆದ ಮೂರು ದಿನಗಳ ಹಿಂದೆ ಹಾಸನದಲ್ಲಿ ನಡೆದಿದ್ದ ಮಿಕ್ಸಿ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಕೋರಿಯರ್‌ ಮಳಿಗೆ ಮಾಲೀಕ ಶಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ಕೈಗೆ ದೊಡ್ಡ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವುದು ಅಗತ್ಯವಾಗಿದೆ. ಆದರೆ, ತನ್ನ ಪತ್ನಿಗೆ ನಿನ್ನೆ ಹೆರಿಗೆ ಆಗಿದ್ದು, ಅವಳಿ ಜವಳಿ ಮಕ್ಕಳು ಜನಿಸಿವೆ. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಂಡತಿ ಮತ್ತು ಮಕ್ಕಳ ಮುಖ ನೋಡಲಾಗಿಲ್ಲ ಎಂದು ಶಶಿ ಅಳಲು ತೋಡಿಕೊಂಡಿದ್ದಾನೆ.

ಹಾಸನ ನಗರದಲ್ಲಿ ಕೋರಿಯರ್‌ ಅಂಗಡಿಯೊಂದರಲ್ಲಿ ಡಿಸೆಂಬರ್ 26 ರಂದು ಮಿಕ್ಸಿ ಬ್ಲಾಸ್ಟ್‌ ಆಗಿತ್ತು. ಈ ಪ್ರಕರಣದ ಬಗ್ಗೆ ಮಾತನಾಡಿದ ಗಾಯಾಳು ಶಶಿ ಘಟನೆ ಬಗ್ಗೆ ಪೂರ್ಣ ವಿವರವನ್ನು ತಿಳಿಸಿದ್ದಾನೆ. ಬೆಂಗಳೂರಿನ ಪೀಣ್ಯದಿಂದ ಫ್ರಮ್ ಅಡ್ರೆಸ್ ಇಲ್ಲದೆ  ಕೊರಿಯರ್ ಬಂದಿತ್ತು. ಪಾರ್ಸೆಲ್ ಓಪನ್ ಮಾಡಿ ನಂತರ ನಮಗೆ ರಿಟರ್ನ್ ಮಾಡೋದಿಕ್ಕೆ ತಂದು ಕೊಟ್ಟರು. ಆಗ ಶಾಪ್‌ ಬಾಗಿಲು ಹಾಕಿ ಮನೆಗೆ ಹೋಗಬೇಕೆಂದುಕೊಂಡೆ. ಆಚೆ ಬರುವಾಗ ಟೇಬಲ್ ಮೇಲಿಂದ ಮಿಕ್ಸಿ ಕೆಳಗೆ ಬಿದ್ದು ಬ್ಲಾಸ್ಟ್ ಆಯಿತು ಎಂದು ಹೇಳಿದ್ದಾನೆ.

ಮಕ್ಕಳ ಮುಖ ನೋಡಲಾಗಿಲ್ಲ: ಡಿಸೆಂಬರ್ 17 ರಂದು ಬಂದಿತ್ತು. ಅದನ್ನು ಮಹಿಳೆಯ ಮನೆಗೂ ತಲುಪಿಸಲಾಗಿತ್ತು. ಆದರೆ, ಮಹಿಳೆ ವಸಂತಾ ಫ್ರಮ್‌ ವಿಳಾಸವಿಲ್ಲದ ಬಾಕ್ಸ್ ಅನ್ನು  26 ರ ಸಂಜೆ ರಿಟರ್ನ್ ಮಾಡಿದರು. ಜೊತೆಗೆ ಕೋರಿಯರ್‌ ವಾಪಸ್‌ ಕಳಿಸಲು 300 ರೂಪಾಯಿ ರಿಟರ್ನ್ ಚಾರ್ಚ್ ಕೇಳಿದರೂ ಕೊಡದೇ ಅದನ್ನು ಇಲ್ಲಿ ಬಿಟ್ಟು ಹೋದರು.  ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಜೀವಕ್ಕೆ ಅಪಾಯ ಆಗುತ್ತಿತ್ತು. ಈಗ ನನ್ನ ಜೀವನ ಹಾಳಾಯಿತು. ನನ್ನ ಪತ್ನಿಗೆ ನಿನ್ನೆ ಹೆರಿಗೆ ಆಗಿದೆ, ಅವಳಿ ಜವಳಿ ಮಕ್ಕಳು ಜನಿಸಿವೆ. ಮಕ್ಕಳ ಮುಖ ನೋಡಲಾಗಿಲ್ಲ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಗಾಯಾಳು ಶಶಿ ನೋವು ತೋಡಿಕೊಂಡಿದ್ದಾನೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more