Hassan Mixi Blast: ನಿನ್ನೆ ಪತ್ನಿಗೆ ಅವಳಿ ಜವಳಿ ಮಕ್ಕಳಾಗಿದ್ದರೂ ಮುಖ ನೋಡಲಾಗಿಲ್ಲ: ಗಾಯಾಳು ಶಶಿ ಅಳಲು

Hassan Mixi Blast: ನಿನ್ನೆ ಪತ್ನಿಗೆ ಅವಳಿ ಜವಳಿ ಮಕ್ಕಳಾಗಿದ್ದರೂ ಮುಖ ನೋಡಲಾಗಿಲ್ಲ: ಗಾಯಾಳು ಶಶಿ ಅಳಲು

Published : Dec 28, 2022, 06:06 PM ISTUpdated : Dec 28, 2022, 06:07 PM IST

ಮಿಕ್ಸಿ ಸ್ಪೋಟ ಪ್ರಕರಣದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದರೆ, ನನ್ನ ಪತ್ನಿಗೆ ನಿನ್ನೆ ಬೇರೊಂದು ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು, ಅವಳಿ ಜವಳಿ ಮಕ್ಕಳು ಜನಿಸಿವೆ. ನಾನು ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಂಡತಿ ಮತ್ತು ಮಕ್ಕಳ ಮುಖ ನೋಡಲಾಗಿಲ್ಲ ಎಂದು ಗಾಯಾಳು ಶಶಿ ಅಳಲು ತೋಡಿಕೊಂಡಿದ್ದಾನೆ.

ಹಾಸನ (ಡಿ.28): ಕಳೆದ ಮೂರು ದಿನಗಳ ಹಿಂದೆ ಹಾಸನದಲ್ಲಿ ನಡೆದಿದ್ದ ಮಿಕ್ಸಿ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಕೋರಿಯರ್‌ ಮಳಿಗೆ ಮಾಲೀಕ ಶಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ಕೈಗೆ ದೊಡ್ಡ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವುದು ಅಗತ್ಯವಾಗಿದೆ. ಆದರೆ, ತನ್ನ ಪತ್ನಿಗೆ ನಿನ್ನೆ ಹೆರಿಗೆ ಆಗಿದ್ದು, ಅವಳಿ ಜವಳಿ ಮಕ್ಕಳು ಜನಿಸಿವೆ. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಂಡತಿ ಮತ್ತು ಮಕ್ಕಳ ಮುಖ ನೋಡಲಾಗಿಲ್ಲ ಎಂದು ಶಶಿ ಅಳಲು ತೋಡಿಕೊಂಡಿದ್ದಾನೆ.

ಹಾಸನ ನಗರದಲ್ಲಿ ಕೋರಿಯರ್‌ ಅಂಗಡಿಯೊಂದರಲ್ಲಿ ಡಿಸೆಂಬರ್ 26 ರಂದು ಮಿಕ್ಸಿ ಬ್ಲಾಸ್ಟ್‌ ಆಗಿತ್ತು. ಈ ಪ್ರಕರಣದ ಬಗ್ಗೆ ಮಾತನಾಡಿದ ಗಾಯಾಳು ಶಶಿ ಘಟನೆ ಬಗ್ಗೆ ಪೂರ್ಣ ವಿವರವನ್ನು ತಿಳಿಸಿದ್ದಾನೆ. ಬೆಂಗಳೂರಿನ ಪೀಣ್ಯದಿಂದ ಫ್ರಮ್ ಅಡ್ರೆಸ್ ಇಲ್ಲದೆ  ಕೊರಿಯರ್ ಬಂದಿತ್ತು. ಪಾರ್ಸೆಲ್ ಓಪನ್ ಮಾಡಿ ನಂತರ ನಮಗೆ ರಿಟರ್ನ್ ಮಾಡೋದಿಕ್ಕೆ ತಂದು ಕೊಟ್ಟರು. ಆಗ ಶಾಪ್‌ ಬಾಗಿಲು ಹಾಕಿ ಮನೆಗೆ ಹೋಗಬೇಕೆಂದುಕೊಂಡೆ. ಆಚೆ ಬರುವಾಗ ಟೇಬಲ್ ಮೇಲಿಂದ ಮಿಕ್ಸಿ ಕೆಳಗೆ ಬಿದ್ದು ಬ್ಲಾಸ್ಟ್ ಆಯಿತು ಎಂದು ಹೇಳಿದ್ದಾನೆ.

ಮಕ್ಕಳ ಮುಖ ನೋಡಲಾಗಿಲ್ಲ: ಡಿಸೆಂಬರ್ 17 ರಂದು ಬಂದಿತ್ತು. ಅದನ್ನು ಮಹಿಳೆಯ ಮನೆಗೂ ತಲುಪಿಸಲಾಗಿತ್ತು. ಆದರೆ, ಮಹಿಳೆ ವಸಂತಾ ಫ್ರಮ್‌ ವಿಳಾಸವಿಲ್ಲದ ಬಾಕ್ಸ್ ಅನ್ನು  26 ರ ಸಂಜೆ ರಿಟರ್ನ್ ಮಾಡಿದರು. ಜೊತೆಗೆ ಕೋರಿಯರ್‌ ವಾಪಸ್‌ ಕಳಿಸಲು 300 ರೂಪಾಯಿ ರಿಟರ್ನ್ ಚಾರ್ಚ್ ಕೇಳಿದರೂ ಕೊಡದೇ ಅದನ್ನು ಇಲ್ಲಿ ಬಿಟ್ಟು ಹೋದರು.  ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಜೀವಕ್ಕೆ ಅಪಾಯ ಆಗುತ್ತಿತ್ತು. ಈಗ ನನ್ನ ಜೀವನ ಹಾಳಾಯಿತು. ನನ್ನ ಪತ್ನಿಗೆ ನಿನ್ನೆ ಹೆರಿಗೆ ಆಗಿದೆ, ಅವಳಿ ಜವಳಿ ಮಕ್ಕಳು ಜನಿಸಿವೆ. ಮಕ್ಕಳ ಮುಖ ನೋಡಲಾಗಿಲ್ಲ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಗಾಯಾಳು ಶಶಿ ನೋವು ತೋಡಿಕೊಂಡಿದ್ದಾನೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more